ದಾವಣಗೆರೆಯಿಂದ ಅಯೋಧ್ಯೆಗೆ ವಿಶೇಷ ರೈಲು ಆರಂಭಿಸಿ: ಸಂಸದ ಡಾ.ಸಿದ್ದೇಶ್ವರ

KannadaprabhaNewsNetwork |  
Published : Feb 11, 2024, 01:45 AM IST
10ಕೆಡಿವಿಜಿ12-ದೆಹಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ರಿಗೆ ದಾವಣಗೆರೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅಯೋಧ್ಯೆಗೆ ದಾವಣಗೆರೆ ಮಾರ್ಗವಾಗಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. | Kannada Prabha

ಸಾರಾಂಶ

ರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮಾರ್ಗ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ, ಅಲ್ಲಿಂದ ಉತ್ತರ ಪ್ರದೇಶದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳ ಜನರಿಗೂ ಅನುಕೂಲವಾಗುವಂತೆ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೂ ಸಾಕಷ್ಟು ಅನಾನುಕೂಲವಾಗಿದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಉತ್ತರ ಪ್ರದೇಶದ ಅಯೋಧ್ಯೆಗೆ ದಾವಣಗೆರೆಯಿಂದ ವಿಶೇಷ ರೈಲು ಸಂಚಾರ ಆರಂಭಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರಿಗೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರನ್ನು ಭೇಟಿ ಮಾಡಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾದ ನಂತರ ಪ್ರತಿದಿನ ಭೇಟಿ ನೀಡುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ದಾವಣಗೆರೆ ಮಾರ್ಗವಾಗಿ ವಿಶೇಷ ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದರು.

ರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮಾರ್ಗ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ, ಅಲ್ಲಿಂದ ಉತ್ತರ ಪ್ರದೇಶದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳ ಜನರಿಗೂ ಅನುಕೂಲವಾಗುವಂತೆ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೂ ಸಾಕಷ್ಟು ಅನಾನುಕೂಲವಾಗಿದೆ ಎಂದು ವಿವರಿಸಿದರು.

ಬೆಂಗಳೂರು ಅಥವಾ ಮೈಸೂರು ಕಡೆಯಿಂದ ಹೊರಡುವ ವಿಶೇಷ ರೈಲುಗಳು ಅರಸೀಕೆರೆ-ಚಿಕ್ಕಜಾಜೂರು-ದಾವಣಗೆರೆ-ಹರಪನಹಳ್ಳಿ-ಕೊಟ್ಟೂರು ಮಾರ್ಗವಾಗಿ ಹೊಸಪೇಟೆ ತಲುಪಿ, ಅಯೋಧ್ಯೆ ಕಡೆಗೆ ಪ್ರಯಾಣ ಬೆಳೆಸುವಂತೆ ವ್ಯವಸ್ಥೆ ಮಾಡಬೇಕು. ಈ ಮೂಲಕ ದಾವಣಗೆರೆ ಸೇರಿ ಮಧ್ಯ ಕರ್ನಾಟಕದ ಜಿಲ್ಲೆಗಳ ಭಕ್ತರಿಗೆ ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆ ದರ್ಶನಕ್ಕೆ ಅನುವು ಮಾಡಿಕೊಡಬೇಕು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರಿಗೆ ಸಂಸದ ಸಿದ್ದೇಶ್ವರ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ