ಕನ್ನಡಪ್ರಭ ವಾರ್ತೆ ಟಿ. ನರಸೀಪುರ
ಕ್ಷೇತ್ರದ ಟೌನ್ ವ್ಯಾಪ್ತಿಯ ಕಡ್ಲೆ ರಂಗಮ್ಮನ ಬೀದಿಯಲ್ಲಿ ಗುರುವಾರ 5 ಕೋಟಿ ರು. ವೆಚ್ಚದ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಸಲ್ಲಿಸಿದ ಅವರಿಗೆ ಸ್ಥಳೀಯರು ಹದಗೆಟ್ಟು ಹಾಳಾಗಿರುವ ರಸ್ತೆಗಳ ಅವ್ಯವಸ್ಥೆ ಮತ್ತು ಒಳಚರಂಡಿಯನ್ನು ನಿರ್ಮಾಣ ಮಾಡದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆ ಒಳಚರಂಡಿ ಕಾಮಗಾರಿ ಕೈಗೊಂಡ ಬಳಿಕವೇ ರಸ್ತೆ ಕಾಮಗಾರಿಯನ್ನು ಆರಂಭಿಸಿ ಎಂದು ಸ್ಥಳದಲ್ಲಿದ್ದ ಪುರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದಲ್ಲಿ ಹದಗೆಟ್ಟು ಹಾಳಾಗಿರುವ ರಸ್ತೆಗಳು ಹಾಗೂ ಪುರಸಭೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಅರಿವಿದೆ. ಆಡಳಿತಾತ್ಮಕ ಲೋಪಗಳನ್ನು ಸರಿಪಡಿಸಿಕೊಂಡು, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಹಲವು ಬಾರಿ ಸೂಚನೆ ನೀಡಿದ್ದೇವೆ. ಮುಂದಿನ ತಿಂಗಳೊಳಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಿ, ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.ಲೋಕೋಪಯೋಗಿ ಕಚೇರಿಗೆ ಕಾಂಪೌಂಡ್ ನಿರ್ಮಾಣ:
ವಿದ್ಯಾರ್ಥಿನಿಯರ ನಿಲಯಕ್ಕೂ ಭೇಟಿ, ಅಹವಾಲು ಆಲಿಕೆ:
ಪುರಸಭೆ ಅಧ್ಯಕ್ಷೆ ಬಿ. ವಸಂತ ಶ್ರೀಕಂಠ, ಸದಸ್ಯರಾದ ನಾಗತ್ನ ಮಾದೇಶ್, ಬಾದಾಮಿ ಮಂಜು, ಸಿ. ಪ್ರಕಾಶ್, ಮದನ್ ರಾಜ್, ಆರ್. ನಾಗರಾಜು, ಸಿದ್ದು, ಮುಖ್ಯಾಧಿಕಾರಿ ಬಿ.ಕೆ. ವಸಂತ ಕುಮಾರಿ, ಕಿರಿಯ ಎಂಜಿನಿಯರ್ ಎ.ಡಿ. ನಾಗರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಚಂದ್ರ, ತಾಪಂ ಮಾಜಿ ಉಪಾಧ್ಯಕ್ಷ ಬಿ. ಮರಯ್ಯ, ಮಾಜಿ ಸದಸ್ಯ ಎಂ. ರಮೇಶ್, ಮೃಗಾಲಯದ ಪ್ರಾಧಿಕಾರದ ಮಾಜಿ ನಿರ್ದೇಶಕಿ ಲತಾ ಜಗದೀಶ್, ಇನ್ ಸ್ಪೆಕ್ಟರ್ ಧನಂಜಯ ಇದ್ದರು.