ಕನ್ನಡಪ್ರಭ ವಾರ್ತೆ ಮುಗಳಖೋಡ
ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಭಾನುವಾರ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅ.30ರಂದು ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಮುಧೋಳ- ನಿಪ್ಪಾಣಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಗುವುದು ಎಂದರು. ನಾಡಿನ ಜಗದ್ಗುರುಗಳು, ಮಠಾಧೀಶರು ನಮ್ಮ ರೈತಪರ ಹೋರಾಟಗಳಿಗೆ ಬೆಂಬಲಿಸಬೇಕು. ಇಂದು ಮಠಮಾನ್ಯಗಳು ನಡೆಯುತ್ತಿರುವುದು ರೈತರಿಂದಲೇ, ನಾಡಿನ ಎಲ್ಲ ಮಠಗಳಿಗೆ ರೈತರ ಕೊಡುವ ದವಸ-ಧಾನ್ಯ, ಭಕ್ತಿಯ ಕಾಣಿಕೆಗಳಿಂದ ನಡೆಯುತ್ತಿರುವುದು, ಕಾರಣ ರೈತರ ಹೋರಾಟಕ್ಕೆ ಬೆಂಬಲಿಸಬೇಕು ಎಂದು ಹೇಳಿದರು.
ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಅನೇಕ ಸಕ್ಕರೆ ಕಾರ್ಖಾನೆಗಳಿದ್ದು, ರೈತರ ಕಷ್ಟಕ್ಕೆ ಯಾರೂ ಸ್ಪಂದಿಸುತ್ತಿಲ್ಲ. ಅದಕ್ಕಾಗಿ ಎಲ್ಲಾ ರೈತ ಬಾಂಧವರು ಗುರ್ಲಾಪುರ ಕ್ರಾಸ್ನಲ್ಲಿ ಮುಧೋಳ- ನಿಪ್ಪಾಣಿ ರಾಷ್ಟ್ರೀಯ ಹೆದ್ದಾರಿ ತಡೆದು ಬಂದ್ ಮಾಡುವ ನಿರ್ಧಾರವನ್ನು ರೈತ ಸಂಘಟನೆ ತೀರ್ಮಾನಿಸಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ರೈತರು ಭಾಗವಹಿಸಬೇಕು ಎಂದು ಕರೆ ನೀಡಿದರು.ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ರೈತರ ತಾಕತ್ತು, ರೈತರ ಒಕ್ಕಟ್ಟನ್ನು ತೋರಿಸಬೇಕಾಗಿದೆ. ಕಾರ್ಖಾನೆಗಳ ಮಾಲೀಕರು ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿಯೇ ಕಾರ್ಖಾನೆಗಳನ್ನು ಆರಂಭಿಸಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ. ಈ ಪ್ರತಿಭಟನೆಯಲ್ಲಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಜನಪರ ಚಿಂತಕರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಚಿಕ್ಕೋಡಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಪ್ಪ ಅಂಗಡಿ ತಿಳಿಸಿದರು.