ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ ಕನಿಷ್ಠ ವೇತನ ಕಾಯ್ದೆಯ ಬಗ್ಗೆ ಕಾರ್ಮಿಕರಿಗೆ ಮಾಹಿತಿ ಇಲ್ಲ. ಮಾಹಿತಿ ಇದ್ದವರಿಗೆ ಯಾರಿಗೆ ದೂರು ನೀಡಬೇಕು ಎಂಬುದರ ಬಗ್ಗೆ ಗೊಂದಲ ವಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಪ್ರತ್ಯೇಕ ಸಹಾಯವಾಣಿ ಆರಂಭಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚಿತ್ರದುರ್ಗ ಹಾಗೂ ದಾವಣಗೆರೆ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ವೇತನ ಕಾಯ್ದೆ ಅಡಿ ಉಲ್ಲಂಘನೆಯ ಕೇವಲ ನಾಲ್ಕು ಪ್ರಕರಣಗ ಳು ದಾಖಲಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದು ಅಧಿಕಾರಿಗಳ ನಿರ್ಲಿಪ್ತ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದರು. ರಾಜ್ಯದ ಕಾರ್ಮಿಕರ ಕಲ್ಯಾಣ ಹಾಗೂ ಹಿತಾಸಕ್ತಿ ಕಾಪಾಡುವ ಹೊಣೆ ಕಾರ್ಮಿಕ ಇಲಾಖೆ ಹೊತ್ತಿದೆ. ಇಲಾಖೆಯಲ್ಲಿ ಬದಲಾವಣೆ ತಂದು, ಶಿಸ್ತು ಮೂಡಿಸಲು ಪ್ರಯತ್ನಿಸಲಾಗುತ್ತದೆ. ಅಧಿಕಾರಿಗಳು ಯಾರಿಗೂ ಭಯಪಡದೆ ಕಾರ್ಮಿಕ ಕಾನೂನುಗಳನ್ನು ಜಾರಿ ಮಾಡಬೇಕು. ಬಡ ಕೂಲಿ ಕಾರ್ಮಿಕರಿಗೆ ಕನಿಷ್ಠ ವೇತನ ದೊರೆಯುವಂತೆ ನೋಡಿಕೊಳ್ಳಬೇಕು. ಜನರಿಗೆ ನ್ಯಾಯ ದೊರಕಿಸಿಕೊಡುವ ಮೂಲಕ ಕಾರ್ಮಿಕ ಇಲಾಖೆಯ ಬಗ್ಗೆ ಭರವಸೆ ಮೂಡಿಸುವ ಕೆಲಸ ಮಾಡಬೇಕು. ಕಾರ್ಮಿಕ ನಿರೀಕ್ಷಕರು ಹಾಗೂ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕಾರ್ಖಾನೆಗಳಿಗೆ ಹಾಗೂ ಕಾರ್ಯ ಕ್ಷೇತ್ರಗಳಿಗೆ ತೆರಳಿ ಪರಿಶೀಲನೆ ನಡೆಸಿ ಮಾಲೀಕರು ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿಸುತ್ತಿದ್ದಾರೆಯೇ ಎನ್ನುವುದ ಖಚಿತಪಡಿಸಿಕೊ ಳ್ಳುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 223 ಕಾರ್ಖಾನೆಗಳಿದ್ದು, ಈ ಪೈಕಿ 11 ಅಪಾಯಕಾರಿ ವಲಯದ ಕಾರ್ಖಾನೆಗಳಿವೆ, ಒಟ್ಟು 11090 ಕಾರ್ಮಿಕರು ಕೆಲಸ ಮಾಡುತ್ತಿ ದ್ದಾರೆ, ಕಾರ್ಖಾನೆ ಮತ್ತು ಬಾಯ್ಲರ್ ವಿಭಾಗದಿಂದ ಈ ವರ್ಷ 49 ತಪಾಸಣೆಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವರು, ಕಾರ್ಖಾನೆಗಳಲ್ಲಿನ ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತಂತೆ ಜಾಗೃತಿ ಮೂಡಿಸಬೇಕು. ಜೊತೆಗೆ ಕಾರ್ಖಾನೆ ಕಾರ್ಮಿಕರುಗಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆಯೇ, ಎಂಬುದರ ಬಗ್ಗೆ ವರದಿಯನ್ನು ಪಡೆಯಬೇಕು ಎಂದು ಸೂಚನೆ ನೀಡಿದರು. ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಭಾರತಿ, ಕಾರ್ಮಿಕ ಇಲಾಖೆ ವಲಯದ ಹೆಚ್ಚುವರಿ ಆಯುಕ್ತ ಮಂಜುನಾಥ್, ಕಾರ್ಖಾನೆ ಮತ್ತು ಬಾಯ್ಲರ್ ವಿಭಾಗದ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಭೆಯಲ್ಲಿ ಇದ್ದರು.