- ನಗರದ ಬಂಟರ ಸಮುದಾಯ ಭವನದಲ್ಲಿ ಆಯೋಜನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ನಡೆಯುವ ಪೂರ್ವಭಾವಿ ಕಾರ್ಯಕಾರಿಣಿಯಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಸಂಘದ ಪದಾಧಿಕಾರಿಗಳು, ಸಂಪಾದಕರು ಭಾಗವಹಿಸಲಿದ್ದಾರೆ ಎಂದರು.
ಪಾವಗಡದಲ್ಲಿ ಸಂಪಾದಕ ರಾಮಾಂಜಿನಪ್ಪ ಮೇಲೆ ಸಾರ್ವಜನಿಕ ಸ್ಥಳದಲ್ಲಿ ನಡೆದ ಹಲ್ಲೆ, ದೌರ್ಜನ್ಯ ಖಂಡಿಸಿ, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಜೊತೆಗೆ ಸಂತ್ರಸ್ಥ ರಾಮಾಂಜಿನಪ್ಪ ಮತ್ತು ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಅರ್ಪಿಸಲಾಗುವುದು ಎಂದರು.ಪತ್ರಕರ್ತ ರಾಮಾಂಜಿನಪ್ಪ ಅವರು ಅಕ್ರಮ ದಂಧೆಗಳು, ರಿಯಲ್ ಎಸ್ಟೇಟ್ ದಂಧೆಯ ಕರಾಳತೆಯನ್ನು ಬಯಲಿಗೆಳೆಯುತ್ತಿದ್ದರು. ದಿಟ್ಟತನದ ವರದಿಗಳ ಮೂಲಕ ಸಂಚಲನ ಮೂಡಿಸುತ್ತಿದ್ದರು. ತಾಲೂಕಿನ ಪ್ರತಿ ಸಮಸ್ಯೆಗಳ ಬಗ್ಗೆ, ಕೆಲವು ಮಾಫಿಯಾಗಳ ಬಗ್ಗೆ ನೇರ ವರದಿ ಮಾಡುತ್ತಿದ್ದರು. ರಾಮಾಂಜಿನಪ್ಪಗೆ ಸರ್ಕಾರ ಭದ್ರತೆ, ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದರು.
ರಾಮಾಂಜಿನಪ್ಪ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಪತ್ರಿಕೆಗಳ ಸಂಪಾದಕರು, ವರದಿಗಾರರು ಅನ್ಯಾಯ, ಅಕ್ರಮಗಳನ್ನು ವರದಿಗಳ ಮೂಲಕ ಬಯಲಿಗೆಳೆಯಲು ಮುಕ್ತ ಅವಕಾಶ ಇರಬೇಕು. ಈ ನಿಟ್ಟಿನಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಇರುವ ಕಾನೂನಿನ ಮಾದರಿಯಲ್ಲೇ ಮಾಧ್ಯಮ ಕ್ಷೇತ್ರದ ಸಿಬ್ಬಂದಿಯ ರಕ್ಷಣೆಗೆ ಕಾನೂನು ರೂಪಿಸಿ, ಜಾರಿಗೊಳಿಸಬೇಕು. ಮುದ್ರಣ ಮತ್ತು ದೃಶ್ಯ ಮಾಧ್ಯಮ ಪ್ರತಿನಿಧಿಗಳಿಗೆ, ನೌಕರರಿಗೆ ಸೂಕ್ತ ರಕ್ಷಣೆ, ಭದ್ರತೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಸಂಘದ ರಾಜ್ಯ ಪರಿಷತ್ತು ಸದಸ್ಯರಾದ ಡಾ. ಬಿ.ವಾಸುದೇವ, ಡಾ. ಕೆ.ಜೈಮುನಿ, ಪ್ರಧಾನ ಕಾರ್ಯದರ್ಶಿ ಗೋವರ್ದನ್, ಖಜಾಂಚಿ ಟಿ.ಜಿ. ಶಿವಮೂರ್ತಿ, ನಾಗರಾಜ ಇದ್ದರು.
ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಸುರೇಶ ಆರ್.ಕುಣಿಬೆಳಕೆರೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಡಾ.ಬಿ.ವಾಸುದೇವ, ಟಿ.ಜಿ.ಶಿವಮೂರ್ತಿ, ಡಾ.ಕೆ.ಜೈಮುನಿ, ಗೋವರ್ದನ, ನಾಗರಾಜ ಇದ್ದರು.