ಗ್ಯಾರಂಟಿ ನಿರ್ವಹಣೆಯಲ್ಲಿಯೇ ರಾಜ್ಯ ಸರ್ಕಾರ ಕಾಲಹರಣ: ನೇಮರಾಜನಾಯ್ಕ

KannadaprabhaNewsNetwork |  
Published : Feb 24, 2024, 02:37 AM IST
ಹಗರಿಬೊಮ್ಮನಹಳ್ಳಿಯ ಗುರುಭವನದಲ್ಲಿ ನಡೆದ ರೆಡ್ಡಿ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಾಸಕ ಕೆ. ನೇಮರಾಜನಾಯ್ಕ ಉದ್ಘಾಟಿಸಿದರು. | Kannada Prabha

ಸಾರಾಂಶ

ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ.

ಹಗರಿಬೊಮ್ಮನಹಳ್ಳಿ: ರೆಡ್ಡಿ ಸಮಾಜ ಹಲವು ಸೌಲಭ್ಯಗಳಿಂದ ವಂಚಿತವಾಗಿದೆ. ಸಮಾಜದ ಭವನ ನಿರ್ಮಾಣಕ್ಕೆ ಲೋಕಸಭೆ ಚುನಾವಣೆ ಬಳಿಕ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಶಾಸಕ ಕೆ. ನೇಮರಾಜನಾಯ್ಕ ತಿಳಿಸಿದರು.

ಪಟ್ಟಣದ ಗುರುಭವನದಲ್ಲಿ ನಡೆದ ತಾಲೂಕು ರೆಡ್ಡಿ ಸಮಾಜದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಶುಕ್ರವಾರ ಮಾತನಾಡಿ, ತಾಲೂಕಿನ ಅಧಿಕಾರಿಗಳು ಜನಸಾಮಾನ್ಯರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು. ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ. ಯಾವುದೇ ಅನುದಾನವನ್ನು ನೀಡದೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ. ರೆಡ್ಡಿ ಸಮುದಾಯದವರು ಇತರೆ ಸಮಾಜಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿ ಸಮಾಜಮುಖಿ ಕೆಲಸದಲ್ಲಿ ತೊಡಗಿದ್ದಾರೆ ಎಂದರು.

ರೆಡ್ಡಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್. ಕೇಶವರೆಡ್ಡಿ ಮಾತನಾಡಿ, ಸಮಾಜದ ಕಲ್ಯಾಣ ಮಂಟಪದ ಬೇಡಿಕೆಯನ್ನು ಸರ್ಕಾರದ ಮುಂದಿರಿಸಿ ಅನುದಾನ ಪಡೆಯುವ ಪ್ರಯತ್ನ ಮಾಡೋಣ. ಸಮಾಜದ ನಾಯಕ ಎಚ್.ಕೆ. ಪಾಟೀಲ್ ಮತ್ತು ರಾಮಲಿಂಗರೆಡ್ಡಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಸಮಾವೇಶದ ಫಲವಾಗಿ ಹೇಮರಡ್ಡಿ ಮಲ್ಲಮ್ಮ ಮತ್ತು ವೇಮನ ಜಯಂತಿಯನ್ನು ಸರ್ಕಾರದಿಂದಲೇ ಆಚರಿಸಲಾಗುತ್ತಿದೆ ಎಂದರು.

ನೂತನ ರೆಡ್ಡಿ ಸಮಾಜದ ಅಧ್ಯಕ್ಷ ಎಂ. ಬಸವರಾಜ ರೆಡ್ಡಿ ಮಾತನಾಡಿ, ಸಮಾಜದ ಪ್ರಗತಿಗೆ ಪೂರಕ ಕ್ರಮ ಮತ್ತು ಹೋರಾಟ ರೂಪಿಸಲಾಗುವುದು. ದಾನಿಗಳ ನೆರವಿನೊಂದಿಗೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಶ್ರಮಿಸಲಾಗುವುದು ಎಂದರು.

ಡಾ. ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಇದೇ ವೇಳೆ ಯುವ ಘಟಕದ ಅಧ್ಯಕ್ಷರಾಗಿ ಪ್ರವೀಣ್ ರೆಡ್ಡಿ ಅಧಿಕಾರ ಸ್ವೀಕರಿಸಿದರು. ರೈತಪರ ಹೋರಾಟಗಾರ ಜೆ.ಎಂ. ವೀರಸಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಡಾ. ಬಸವರಾಜ ರೆಡ್ಡಿ, ಬನ್ನಿಗೋಳ ವೆಂಕಣ್ಣ, ಸಂಜೀವರೆಡ್ಡಿ, ಹನುಮರೆಡ್ಡಿ, ದೊಡ್ಡಬಸಪ್ಪ ರೆಡ್ಡಿ, ಪ್ರದೀಪ್ ಗುಡ್ಡದ್, ಯಲ್ಲಪ್ಪಗೌಡ ಪೂಜಾರ್, ರಾಜಶೇಖರರೆಡ್ಡಿ, ಇತರರಿದ್ದರು. ಕಸಾಪ ಮಾಜಿ ಅಧ್ಯಕ್ಷ ಯಂಕರೆಡ್ಡಿ, ಜಿ. ಹನುಮರೆಡ್ಡಿ, ಸುಗ್ಗನಹಳ್ಳಿ ವೆಂಕರೆಡ್ಡಿ, ಬಸವರೆಡ್ಡಿ, ಶಿವರೆಡ್ಡಿ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ