ಬೆಲೆ ಏರಿಕೆ ಖಂಡಿಸಿ ಬಿಜೆಪಿ ಧರಣಿ
ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ತಾಲೂಕಿನ ಆವತಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದರು.
ಪಹಾಲ್ಗಮ್ ದಾಳಿ ನಂತರ ರಾಜ್ಯದ ಮುಖ್ಯಮಂತ್ರಿ ಮತ್ತು ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಆಲ್ದೂರು ಮಂಡಲದ ಬಿಜೆಪಿ ಅಧ್ಯಕ್ಷ ರವಿ ಬಸರವಳ್ಳಿ ಮಾತನಾಡಿ, ಹಿಂದೂಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲ ಇಲ್ಲ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮಾಡಿದ ಹಂತಕರಿಗೆ ತಕ್ಷಣ ಶಿಕ್ಷೆ ಕೊಡಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮಾತನಾಡಿ, ಅಂಬೇಡ್ಕರ್ ಬಗ್ಗೆ ಹೆಚ್ಚು ಮಾತನಾಡುವ ಕಾಂಗ್ರೆಸ್ಸಿಗರು ಅವರ ಆಪ್ತ ಕಾರ್ಯದರ್ಶಿಯನ್ನೇ ಅವರ ವಿರುದ್ಧ ಸ್ಪರ್ಧಿಸುವಂತೆ ಮಾಡಿ ಸೋಲಿಸಿದ ಸಾಧನೆಗೆ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಅಂಬೇಡ್ಕರ್ ಅವರಿಗೆ ಅವಮಾನಿಸಿರುವುದು ಕಾಂಗ್ರೆಸ್ಸಿಗೆ ಸಲ್ಲುವ ಗೌರವ ಎಂದು ಛೇಡಿಸಿದರು.
ಆವತಿ ಹೋಬಳಿ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಮಂಜು, ಪಕ್ಷದ ಮುಖಂಡರಾದ ಡಿ.ಜೆ.ನಾಗೇಶ್ ಬೈಗೂರ್ ನಾಗೇಶ್, ರವೀಂದ್ರ ಅನಿಗನಹಳ್ಳಿ, ಸೋಮೇಶ್ ಕರಗೂರು, ಮಂಜು ಮಲ್ಲಂದೂರು, ಶಶಿ ಆಲ್ದೂರು, ಚಂಪಾ ಜಗದೀಶ್, ಭವ್ಯ ನಟೇಶ್, ಕಾರ್ಯಕರ್ತರು ಪಾಲ್ಗೊಂಡಿದ್ದರು.