ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ-ಬೊಮ್ಮಾಯಿ

KannadaprabhaNewsNetwork |  
Published : Dec 27, 2024, 12:46 AM IST
26ಎಚ್‌ವಿಆರ್‌6 | Kannada Prabha

ಸಾರಾಂಶ

ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಅಂಧಾದುಂಧಿ ಸರ್ಕಾರ ನಡೆಯುತ್ತಿದೆ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹಾವೇರಿ: ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಅಂಧಾದುಂಧಿ ಸರ್ಕಾರ ನಡೆಯುತ್ತಿದೆ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ಇಲ್ಲಿಯ ತಾಪಂ ಆವರಣದಲ್ಲಿರುವ ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾವೇರಿಯಲ್ಲಿ ಗುತ್ತಿಗೆದಾರರು ಯಾಕೆ ಕೆಲಸ ಮಾಡುತ್ತಿಲ್ಲ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ. ಗುತ್ತಿಗೆದಾರರು ಗುತ್ತಿಗೆ ತೆಗೆದುಕೊಂಡ ಸಮಯ, ಸ್ಥಳಿಯ ನಿಬಂಧನೆಗಳು ಏನು ಎನ್ನುವುದರ ಬಗ್ಗೆ ತನಿಖೆಯಾಗಬೇಕು. ಕೇಂದ್ರ ಸರ್ಕಾರದ ಅಮೃತ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಂಡಿದ್ದು, ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿದೆ. ಈ ಯೋಜನೆ ಎಲ್ಲೆಲ್ಲಿ ಆರಂಭವಾಗಿ ಮುಕ್ತಾಯದ ಹಂತಕ್ಕೆ ಬಂದಿದೆ. ಯಾವ ವಾರ್ಡ್‌ನಲ್ಲಿ ಎಲ್ಲಿಗೆ ನಿಂತಿದೆ ಎನ್ನುವ ಕುರಿತು ಕೂಡಲೇ ಇನ್ನೊಬ್ಬ ಗುತ್ತಿಗೆದಾರನಿಂದ ಕೆಲಸ ಆರಂಭಿಸಬೇಕು ಎಂದು ನಾನು ದಿಶಾ ಸಭೆಯಲ್ಲಿ ಹೇಳಿದ್ದೆ. ಹಳೆ ಗುತ್ತಿಗೆದಾರ ಕೋರ್ಟ್‌ಗೆ ಹೋಗಿದ್ದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ಇನ್ನೊಂದು ಡಿಪಿಆರ್ ಮಾಡಿ, ಸರ್ಕಾರ ಹಣ ಒದಗಿಸಿ ಕೆಲಸ ಪ್ರಾರಂಭಿಸಬೇಕು ಎಂದು ಒಂದು ತೀರ್ಮಾನವನ್ನು ಮಾಡಿದ್ದೇವು. ಈ ಸರ್ಕಾರ ಸ್ಪಂದಿಸಿಲ್ಲ. ಮುಂದಿನ ದಿಶಾ ಸಭೆಯಲ್ಲಿ ಈ ಕುರಿತು ಏನಾಗಿದೆ ಎಂಬ ಮಾಹಿತಿ ಪಡೆಯಲಾಗುವುದು. ಆದರೆ, ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿಗೆ ನಾನು ಬೆನ್ನು ಹತ್ತಿ ಕೆಲಸ ಮಾಡಿಸುವೆ ಎಂದು ಹೇಳಿದರು. ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ಹಿಡಿತ ಕಳೆದುಕೊಂಡಿದೆ. ಏಕೆಂದರೆ ಅಧಿಕಾರಿಗಳ ಜೊತೆ ಅವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಯಾವ ಕೆಲಸವೂ ಆಗುತ್ತಿಲ್ಲ. ಗ್ರಾಮೀಣ ರಸ್ತೆಗಳು ಸಾಕಷ್ಟು ಹದಗೆಟ್ಟಿದ್ದು ಅವುಗಳ ದುರಸ್ತಿ ಹಾಗೂ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ ಕೇಳಿದ್ದೇನೆ ಅವುಗಳಿಗೆ ಮಂಜೂರಾತಿ ಪಡೆದುಕೊಳ್ಳುತ್ತೇನೆ. ಶಿವಮೊಗ್ಗ- ರಾಣಿಬೆನ್ನೂರು ರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆದಷ್ಟು ಬೇಗ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ವಾರ ಸಭೆ ನಡೆಸಿ, ರೈಲು ಮಾರ್ಗದ ಕುರಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸೂಚಿಸಿದ್ದೇನೆ. ಆದಷ್ಟು ಬೇಗ ಪ್ರಕ್ರಿಯೆ ಆರಂಭಿಸುತ್ತೇವೆ. ಗದಗ ಯಲವಿಗಿ ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ 200 ಕೋಟಿ ರುಪಾಯಿ‌ ಒದಗಿಸಿದೆ. ರಾಜ್ಯ ಸರ್ಕಾರ. ತನ್ನ ಪಾಲಿನ ಹಣವನ್ನು ನೀಡಿ, ಭೂಸ್ವಾಧೀನ ಮಾಡಬೇಕು ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಮುಖ್ಯಮಂತ್ರಿಗಳಿಗೆ ಹಣ ಒದಗಿಸಲು ಪತ್ರ ಬರೆದಿದ್ದೇನೆ‌. ಅಧಿಕಾರಿಗಳು ಕೊಟ್ಟಿರುವ ಮಾಹಿತಿ ಪ್ರಕಾರ ಮಾರ್ಚ್ ಹೊತ್ತಿಗೆ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯಲಿದೆ. ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''