ಸೋಮರಡ್ಡಿ ಅಳವಂಡಿ
ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮತ್ತು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಆಯ್ಕೆ ಮಾಡಿದ ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದಾಗಿರುವ ಹಾಗೂ ವಿಶ್ವದ ಪ್ರಾಗೈತಿಕ ಇತಿಹಾಸವನ್ನು ಗಟ್ಟಿಯಾಗಿ ಇಂದಿಗೂ ಹಿಡಿದುಕೊಂಡಿರುವ ಹಿರೇಬೆಣಕಲ್ ಮೊರೇರ ತಟ್ಟೆಗಳು (ಶಿಲಾ ಸಮಾಧಿಗಳಿರುವ) ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ರೂಪಿಸಿರುವ ದತ್ತು ಯೋಜನೆಯಡಿ ರಾಜ್ಯ ಸರ್ಕಾರ ಹಿರೇಬೆಣಕಲ್ ಶಿಲಾಸಮಾಧಿಗಳು ಇರುವ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಂದಾಗಿ, ಯೋಜನೆ ರೂಪಿಸಿದೆ. ಇದಕ್ಕೆ ಪೂರಕವಾಗಿಯೇ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಅವರು ಜೂ. 17ರಂದು ಹಿರೇಬೆಣಕಲ್ನಲ್ಲಿಯೇ ಇಡೀ ದಿನ ಅಭಿವೃದ್ಧಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.ಸ್ಥಳೀಯವಾಗಿಯೇ ಇದ್ದುಕೊಂಡು, ಮಾಡಬಹುದಾದ ಅಭಿವೃದ್ಧಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಮತ್ತು ಸ್ಥಳೀಯರಿಂದಲೂ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಪ್ರವಾಸೋದ್ಯಮ ಸಚಿವರೊಬ್ಬರು ಹಿರೇಬೆಣಕಲ್ ಶಿಲಾಸಮಾಧಿಗಳು ವಿಶ್ವದಲ್ಲಿಯೇ ವಿಶಿಷ್ಟ ಎಂದು ಹೇಳಿರುವುದು ಹಾಗೂ ಇವುಗಳನ್ನು ನಾಡಿಗೆ ಪರಿಚಯಿಸುವ ಮತ್ತು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಹೇಳಿ, ಅಭಿವೃದ್ಧಿಗೆ ಮುಂದಾಗಿದ್ದಾರೆ.
ಸರ್ಕಾರದ ನಿರ್ಲಕ್ಷ್ಯ:
ಮಹತ್ವ:
7 ಅದ್ಭುತಗಳಲ್ಲೊಂದು:
ಎಲ್ಲಿ ಬರುತ್ತವೆ:
ವಿಶ್ವದಲ್ಲಿಯೇ ಪ್ರಾಗೈತಿಕ ಹಿರಿಮೆಯನ್ನು ಹಿಡಿದಿಟ್ಟುಕೊಂಡಿರುವ ಶಿಲಾ ಸಮಾಧಿಗಳನ್ನು ಹಾಳಾಗದಂತೆ ಸಂರಕ್ಷಣೆ ಮಾಡಬೇಕಾಗಿದೆ. ಸುತ್ತಲೂ ಬೇಲಿ ಹಾಕಬೇಕಾಗಿದೆ. ಅವುಗಳನ್ನು ನಿರಂತರವಾಗಿ ಹಗಲು, ರಾತ್ರಿ ಕಾಯುವ ಮೂಲಕ ನಿಧಿಗಳ್ಳರಿಂದ ರಕ್ಷಿಸಬೇಕಾಗಿದೆ. ಇಲ್ಲಿಗೆ ಸುಲಭವಾಗಿ ತೆರಳಲು ರಸ್ತೆ ನಿರ್ಮಾಣ, ಅವುಗಳ ಮಹತ್ವ ಸಾರುವ ಫಲಕ ಅಳವಡಿಕೆ ಹಾಗೂ ಇನ್ನಷ್ಟು ಸಂಶೋಧನೆಗಳು ನಡೆಯಬೇಕಿವೆ.ಹಿರೇಬೆಣಕಲ್ ಶಿಲಾಸಮಾಧಿಗಳು ಕೇವಲ ರಾಜ್ಯವಲ್ಲದೆ ದೇಶದಲ್ಲಿಯೇ ವಿಶೇಷವಾಗಿವೆ. ಇವುಗಳ ಅಭಿವೃದ್ಧಿ ಅಗತ್ಯವಿದ್ದು ನಾಡಿಗೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.ಹಿರೇಬೆಣಕಲ್ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ. ತೆರಳುವ ಮಾರ್ಗ ಅತಿಕ್ರಮಣವಾಗಿದ್ದು ತೆರವಾಗಬೇಕು. ಯಾತ್ರಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಾಣ, ಗುಡ್ಡದ ಮೇಲೆ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಎಂದು ಸಂಶೋಧಕ ಶರಣಬಸಪ್ಪ ಕೋಲ್ಕಾರ ತಿಳಿಸಿದ್ದಾರೆ.