ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ರಸ್ತೆಗಳು ಹಾಗೂ ಚರಂಡಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆ, ಎಸ್ಸಿಪಿ ಯೋಜನೆಯಡಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ಯ್ ಡ್ಯಾಂ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಿದ್ದೇವೆ ಎಂದರು.
ಲೋಕೋಪಯೋಗಿ ಇಲಾಖೆಯಿಂದ ತಾಲೂಕಿನ ಕನಗನಹಳ್ಳಿಯಲ್ಲಿ 20 ಲಕ್ಷ, ಕಾಳೇಗೌಡನಕೊಪ್ಪಲು ಗ್ರಾಮದಲ್ಲಿ 20 ಲಕ್ಷ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಿದರು. ಎಸ್ಸಿಪಿ ಯೋಜನೆಯಡಿ ಗಮ್ಮನಹಳ್ಳಿ ಹೊಸೂರು ಕಾಲೋನಿಯಲ್ಲಿ 25 ಲಕ್ಷ ಹಾಗೂ ಮೊಳ್ಳೇನಹಳ್ಳಿಯಲ್ಲಿ 25 ಲಕ್ಷ ರು., ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ, ಚಿನಕುರಳಿ ಗ್ರಾಮದಲ್ಲಿ ಕೆಆರ್ ಐಡಿಎಲ್ ಇಲಾಖೆಯಿಂದ 50 ಲಕ್ಷ ರು. ಯೋಜನೆಯಡಿ ಸಂತೆ ಅಭಿವೃದ್ಧಿಗೆ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಚಿಕ್ಕಬೋಗನಹಳ್ಳಿ-ಹಸನ್ ಪುರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ ಎಂದರು.ಡ್ಯಾಂನಹಳ್ಳಿ ನೀರಿನ ಕೊರತೆ ಕಡಿಮೆ ಇರುವ ಕಾರಣ ರೈತರು ಬೆಳೆ ಬೆಳೆಯದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಶಾಸಕರು, ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಬೇಕು, ರೈತರು ಭೂಮಿಯನ್ನೆ ನೆಚ್ಚಿಕೊಂಡು ಬದುಕು ನಡೆಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲೂ ಸಹ ಕಬ್ಬು ಬೆಳೆ ಒಣಗುತ್ತಿದೆ. ಹಾಗಾಗಿ ನಾಲೆಗೆ ಒಂದು ಕಟ್ಟು ನೀರು ಹರಿಸಬೇಕೆಂದು ನಮ್ಮ ಒತ್ತಾಯವಾಗಿದೆ. ಸಂಘಟನೆಯಿಂದ ಪ್ರತಿಭಟನೆ ನಡೆಸುತ್ತಿದ್ದೇವೆ, ಹಾಗಾಗಿ ಸರ್ಕಾರ ರೈತರಿಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.