ರಾತ್ರೋರಾತ್ರಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ..!

KannadaprabhaNewsNetwork |  
Published : Aug 16, 2026, 02:45 AM IST
15ಕೆಎಂಎನ್ ಡಿ24,25 | Kannada Prabha

ಸಾರಾಂಶ

ಕೃಷ್ಣರಾಜಸಾಗರ ಜಲಾಶಯದಿಂದ 10 ಗೇಟ್‌ಗಳ ಮೂಲಕ ಶುಕ್ರವಾರ ರಾತ್ರಿ ತಮಿಳುನಾಡಿಗೆ ನೀರು ಹರಿಸುವುದರೊಂದಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರದ ಆದೇಶನ್ನು ರಾಜ್ಯ ಸರ್ಕಾರ ಪಾಲಿಸುವಂತಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕೃಷ್ಣರಾಜಸಾಗರ ಜಲಾಶಯದಿಂದ 10 ಗೇಟ್‌ಗಳ ಮೂಲಕ ಶುಕ್ರವಾರ ರಾತ್ರಿ ತಮಿಳುನಾಡಿಗೆ ನೀರು ಹರಿಸುವುದರೊಂದಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರದ ಆದೇಶನ್ನು ರಾಜ್ಯ ಸರ್ಕಾರ ಪಾಲಿಸುವಂತಾಗಿದೆ.

ಪ್ರತಿನಿತ್ಯ 12 ಸಾವಿರ ಕ್ಯುಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಸಿಡಬ್ಲ್ಯೂಸಿ ಹಾಗೂ ಸಿಡಬ್ಲ್ಯೂಆರ್‌ಎ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ, ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿದ್ದ ಒಳ ಹರಿವಿನ ಪ್ರಮಾಣ ಇಳಿಮುಖವಾದ ಕಾರಣ ಕೆ.ಆರ್.ಎಸ್.ಜಲಾಶಯದಿಂದಲೇ ನೀರು ಬಿಡಲಾಗುತ್ತಿದೆ.

ಶುಕ್ರವಾರ ರಾತ್ರಿ 9 ಗಂಟೆಯ ನಂತರ +80 ಮಟ್ಟದ ಏಳೆಂಟು ಗೇಟ್‌ಗಳ ಮೂಲಕ ನದಿಗೆ ಮತ್ತು ನಾಲೆಗಳಿಗೆ 6 ಸಾವಿರಕ್ಕೂ ಹೆಚ್ಚು ನೀರು ಹರಿಸಲಾಗಿದೆ.

ಸದ್ಯ ಜಲಾಶಯದಲ್ಲಿ 109.75 ಅಡಿ ನೀರಿನ ಸಂಗ್ರಹವಿದ್ದು, ಒಳ ಹರಿವು 2274 ಕ್ಯುಸೆಕ್ ಇದೆ. ಶುಕ್ರವಾರ ರಾತ್ರಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿ ಬೆಳಗಿನ ಹೊತ್ತಿಗೆ ಹೊರ ಹರಿವು 2699ಕ್ಕೆ ಸೀಮಿತಗೊಳಿಸಲಾಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ತಮಿಳುನಾಡಿಗೆ ನೀರು ಬಿಟ್ಟಿಲ್ಲ:

ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಬೆಳೆಗಳಿಗಾಗಿ ನದಿ ಮತ್ತು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶುಕ್ರವಾರ ರಾತ್ರಿ ಹರಿಯುತ್ತಿದ್ದುದ್ದನ್ನು ಗಮನಿಸಿದ್ದ ರೈತರು ನದಿಗೆ ಬಿಟ್ಟಿರುವ ನೀರು ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರ ಆದೇಶ ನೀಡಿರುವಂತೆ ರಾಜ್ಯ ಸರ್ಕಾರ ರೈತರು ಮತ್ತು ಸಂಘಟನೆಗಳ ವಿರೋಧದ ನಡುವೆಯೂ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ವಿ.ಜೆ.ಶೋಭರಾಣಿ ಅವರೊಂದಿಗೆ ವೀಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ್ದಾರೆನ್ನಲಾದ ವೀಡಿಯೋ ತುಣುಕು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನದಿಯಲ್ಲಿ ನೀರು ಹರಿಸಲಾಗುತ್ತಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಶಕ್ತಿಯನ್ನು ಸರಿದಾರಿಗೆ ಕರೆದೊಯ್ಯುವ ಆದರ್ಶ ಪುರುಷರ ಸಂಖ್ಯೆ ಕಡಿಮೆ: ತಿಮ್ಮರಾಯಿಗೌಡ
ದೇಶಾಭಿಮಾನ ಎಂಬುದು ಎದೆಯೊಳಗೆ ಇರಬೇಕು