ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿ: ಜೋಶಿ

KannadaprabhaNewsNetwork |  
Published : May 11, 2025, 11:49 PM IST
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪೌರಕಾರ್ಮಿಕರಿಗೆ ನೇರನೇಮಕಾತಿ ಆದೇಶ ಪತ್ರ ವಿತರಿಸಿದರು. | Kannada Prabha

ಸಾರಾಂಶ

ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ.

ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಕಾಲಕಾಲಕ್ಕೆ ಅನುದಾನ ಬಿಡುಗಡೆಯಾಗಬೇಕು. ಅನುದಾನ ಬಿಡುಗಡೆ ಸಂಬಂಧ ವ್ಯವಸ್ಥೆ ರೂಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ನೇರ ನೇಮಕಾತಿಯಡಿ ಭಾನುವಾರ ನೇಮಕಾತಿ ಆದೇಶ ಪ್ರತಿ ವಿತರಿಸಿ ಮಾತನಾಡಿದರು.

ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ ಎಂದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ನೇರ ನೇಮಕಾತಿ ಮತ್ತು ನೇರ ಸಂಬಳ ಪಾವತಿಯ ಸಮಸ್ಯೆ ಬಹಳ ದಿನದಿಂದ ಇದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರ ಕಾರ್ಯ ಮಾಡುಸುತ್ತಿದೆ. ಮೈಸೂರಿನಲ್ಲಿ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಅದರಂತೆ ಅವಳಿ ನಗರದಲ್ಲೂ ನೇರ ನೇಮಕಾತಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಗಮನ ಸೆಳೆಯಲಾಗುವುದು ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, 870 ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕಿತ್ತು. ಸದ್ಯ 127 ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದವರನ್ನೂ ಶೀಘ್ರದಲ್ಲಿ ನೇಮಕ ಮಾಡಿಕೊಳ್ಳಬೇಕು. ಬಾಕಿ ಹಣ ಬಿಡುಗಡೆ ಮಾಡಬೇಕು. ಈ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಮೇಯರ್ ರಾಮಪ್ಪ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಯುಕ್ತ ಡಾ. ರುದ್ರೇಶ ಘಾಳಿ, ಉಪ ಮೇಯರ್ ದುರ್ಗಮ್ಮ ಬಿಜವಾಡ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ, ಪಾಲಿಕೆ ಸದಸ್ಯರಾದ ಉಮಾ ಮುಕುಂದಿ, ರೂಪಾ ಶೆಟ್ಟಿ, ದೊರಾಜ್‌ ಮಣಿಕುಂಟ್ಲಾ, ಅರ್ಜುನ ಪಾಟೀಲ, ಸರಸ್ವತಿ ಧೋಂಗಡಿ, ಪ್ರೀತಿ ಖೋಡೆ, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ