ಕನ್ನಡಪ್ರಭ ವಾರ್ತೆ ಸಿದ್ದಾಪುರ
ಪಟ್ಟಣದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಉತ್ತರ ಕನ್ನಡ ಜಿಲ್ಲೆಯ ಜನಜೀವನದ ಮೇಲೆ ತುಂಬಾ ಪರಿಣಾಮ ಬೀರಲಿದೆ. ಇಲ್ಲಿಯ ಕೃಷಿ, ತೋಟಗಾರಿಕೆ ಸೇರಿ ರೈತಾಪಿ ವರ್ಗದ ಕೃಷಿ ಚಟುವಟಿಕೆ ಸಂಪೂರ್ಣ ಕುಂಠಿತಗೊಳ್ಳಲಿದೆ. ಜನಜೀವನಕ್ಕೆ ಮಾರಕವಾಗಿರುವ ಈ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ತಿರಸ್ಕರಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರು ಈಗಾಗಲೇ ನಮ್ಮ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ನಾನು ಹಿಂದಿನ ಅಧಿವೇಶನದಲ್ಲೆ ವಿರೋಧಿಸಿದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೊಳಿಸಲ್ಲ ಎಂದು ತಿಳಿಸಿದ್ದರು. ಇದೀಗ ಜಿಲ್ಲೆಯ ಎಲ್ಲಾ ಶಾಸಕರು, ಸಾಗರ ಶಾಸಕರು ಹಾಗೂ ಈ ವರದಿ ಪರಿಣಾಮ ಬೀರಲಿರುವ ಎಲ್ಲಾ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜತೆ ಚರ್ಚಿಸಿ ಸಾಧಕ-ಬಾಧಕಗಳನ್ನು ಮನವರಿಕೆ ಮಾಡಿದ್ದು, ಇದನ್ನು ಸಂಪೂರ್ಣ ತಿರಸ್ಕರಿಸುವುದಾಗಿ ತಿಳಿಸಿದಲ್ಲದೇ ಈಗಾಗಲೇ ಅಧಿಕಾರಿಗಳಿಗೂ ಸಹ ಸೂಚನೆ ನೀಡಿದ್ದಾರೆ ಎಂದರು.ಕೇಂದ್ರ ಸರ್ಕಾರ ಜಿಲ್ಲೆಯ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಿ ಸ್ಥಳೀಯರ ಅಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾಗುತ್ತಿರುವುದು ಸರಿಯಲ್ಲ ಎಂದರು.
ಈ ಸಂದರ್ಭ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಜಿಪಂ ಮಾಜಿ ಸದಸ್ಯ ವಿ.ಎನ್. ನಾಯ್ಕ, ತಾಪಂ ಮಾಜಿ ಅಧ್ಯಕ್ಷ ಸಿ.ಆರ್. ನಾಯ್ಕ ಮತ್ತಿತರರಿದ್ದರು.