ಕನ್ನಡಪ್ರಭ ವಾರ್ತೆ ಬೆಂಗಳೂರು
ಹೈಕೋರ್ಟ್ನಲ್ಲಿ ಸೋಮವಾರ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನ್ಯಾಯದಾನ ವ್ಯವಸ್ಥೆಯನ್ನು ಕ್ರಾಂತಿಕಾರಗೊಳಿಸುವಲ್ಲಿ ಕರ್ನಾಟಕ ಹೈಕೋರ್ಟ್ ಹಲವು ವಿನೂತನ ಕ್ರಮ ಕೈಗೊಂಡಿದೆ. ತಾಂತ್ರಿಕ ಸುಧಾರಣೆ ನ್ಯಾಯದಾನ ವ್ಯವಸ್ಥೆಯಲ್ಲಿ ಅಪಾರ ಬದಲಾವಣೆ ತಂದಿದೆ. ಇ-ಕೋರ್ಟ್, ಪ್ರಕರಣಗಳ ಗಣಕೀಕರಣ, ಪ್ರಕರಣದ ಆರಂಭದಿಂದ ಅಂತ್ಯದವರೆಗೆ ದತ್ತಾಂಶ ನಿರ್ವಹಣೆ ಮಾಡಲಾಗುತ್ತಿದೆ. ಅದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ನ್ಯಾಯಾಂಗ ಅಧಿಕಾರಿಗಳು, ವಿಷಯ ಪರಿಣತರು ನಿಯೋಜಿಸಲಾಗುತ್ತಿದೆ. ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆಯಿಂದ ಸಕಾರಾತ್ಮಕ ಫಲಿತಾಂಶ ಬರುತ್ತಿದೆ ಎಂದು ತಿಳಿಸಿದರು.ವಕೀಲರ ಸಂಘ ಸನ್ಮಾನ:
ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ಕರ್ನಾಟಕ ಹೈಕೋರ್ಟ್ಗೆ ನಮ್ಮವರೇ ಮುಖ್ಯ ನ್ಯಾಯಮೂರ್ತಿಯಾಗಲು ಮೂರು ದಶಕಗಳೇ ಕಾಯಬೇಕಾಯಿತು. ಇದು ಅಪರೂಪದ ಸಂಗತಿ ಸಂತಸ ವ್ಯಕ್ತಪಡಿಸಿದರು.
ಹೈಕೋರ್ಟ್ ನ್ಯಾಯಮೂರ್ತಿ ಕೆ.ಸೋಮಶೇಖರ್, ರಾಜ್ಯ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಉಪಸ್ಥಿತರಿದ್ದರು.