ಧಾರವಾಡ:
ಆರಂಭದಲ್ಲಿ ತಾಲೂಕಿನ ಗರಗ ಹಾಗೂ ಅಮ್ಮಿನಭಾವಿ ಹೋಬಳಿಯ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ ತಂಡವು, ತಾಲೂಕಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಸುರಿದ ನಿರಂತರ ಮಳೆಯಿಂದಾಗಿ ಬೆಳೆ ಹಾನಿ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಮೀಕ್ಷಾ ತಂಡದ ಸದಸ್ಯರು ಆಲೂಗಡ್ಡೆ ಮತ್ತು ಸೇವಂತಿಗೆ ಬೆಳೆಗಳನ್ನು ವೀಕ್ಷಿಸಿದರು.
ಜಂಟಿ ಸಮೀಕ್ಷೆ ತಂಡದ ಮುಖ್ಯಸ್ಥರಾದ ಉಡುಪಿ ಅಪರ ಜಿಲ್ಲಾಧಿಕಾರಿ ಕೆ. ಕಾವ್ಯಾರಾಣಿ, ಉಡುಪಿ ತೋಟಗಾರಿಕೆ ಉಪ ನಿರ್ದೇಶಕ, ಶಿರಸಿ ಉಪ ವಿಭಾಗಾಧಿಕಾರಿ, ಧಾರವಾಡ ತೋಟಗಾರಿಕೆ ಉಪ ನಿರ್ದೇಶಕ ಕಾಶಿನಾಥ ಭದ್ರನವರ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ನೇತೃತ್ವದಲ್ಲಿ ತಾಲೂಕಿನ ತಡಕೋಡ ಹಾಗೂ ಕುರುಬಗಟ್ಟಿ, ಅಮ್ಮಿನಬಾವಿ ಗ್ರಾಮಗಳಿಗೆ ಅಧಿಕಾರಿಗಳ ತಂಡ ರೈತರ ಹೊಲಗಳಿಗೆ ನೀಡಿತು. ಹೂದೋಟ, ಆಲುಗಡ್ಡೆ, ಈರುಳ್ಳಿ, ಹತ್ತಿ ಬೆಳೆಗಳ ಹಾನಿ ಕುರಿತು ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ರೈತರು ತಾವು ಬೆಳೆದ ಬೆಳೆಗಳಿಗೆ ತಗುಲಿದ ಖರ್ಚು-ವೆಚ್ಚಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ರೈತರ ಮನವಿಗೆ ಸ್ಪಂದಿಸಿದ ಸಮೀಕ್ಷಾ ತಂಡದ ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಧಾರವಾಡ ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ, ಕೃಷಿ ಉಪನಿರ್ದೇಶಕಿ ಜಯಶ್ರೀ ಹಿರೇಮಠ, ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ, ಕೃಷಿ ಅಧಿಕಾರಿ ಮಹದೇವ ಸರಶೆಟ್ಟಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಇಮ್ಮಿಯಾಜ್, ಮತ್ತಿತರರು ಇದ್ದರು.