ಕೋಲಾರದಲ್ಲಿ ರಾಜ್ಯ ಮಟ್ಟದ ಬ್ಯಾಸ್ಕೆಟ್ ಬಾಲ್ ಪಂದ್ಯ

KannadaprabhaNewsNetwork |  
Published : Dec 21, 2025, 02:00 AM IST
೨೦ಕೆಎಲ್‌ಆರ್-೩ಕೋಲಾರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ೪೪ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್‍ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ಸಂಸದ ಎಂ.ಮಲ್ಲೇಶ್‌ಬಾಬು ಚಾಲನೆ ನೀಡಿದರು. | Kannada Prabha

ಸಾರಾಂಶ

ಕೋಲಾರ ಜಿಲ್ಲೆಯು ಚಿನ್ನ, ರೇಷ್ಮೆ, ಹಾಲು, ಮಾವು ಮಾತ್ರವಲ್ಲ ಕ್ರೀಡೆಗಳಲ್ಲೂ ಉತ್ತಮ ಪ್ರತಿಭೆಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದೆ, ಬ್ಯಾಸ್ಕೆಟ್ ಬಾಲ್ ರಾಜ್ಯ ಮಟ್ಟದ ಪಂದ್ಯಾವಳಿಯನ್ನು ಕೋಲಾರದಲ್ಲಿ ಆಯೋಜಿಸುವ ಚಿಂತನೆ ಇದೆ. ಯಾವುದೇ ಕ್ರೀಡೆ ನಿರಂತವಾಗಿ ಆಭ್ಯಾಸ ಮಾಡುತ್ತಿದ್ದರೆ ಆರೋಗ್ಯದಿಂದ ಇರಬಹುದು.

ಕನ್ನಡಪ್ರಭ ವಾರ್ತೆ ಕೋಲಾರಕ್ರೀಡಾ ಉತ್ಸಾಹಕ್ಕೆ ವಯಸ್ಸಿನ ಅಂತರವಿಲ್ಲ ಎಂಬುವುದನ್ನು ಇಂದಿನ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಎಂದು ಸಂಸದ ಎಂ.ಮಲ್ಲೇಶ್‌ಬಾಬು ಅಭಿಪ್ರಾಯಪಟ್ಟರು.ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್‌ನಿಂದ ೪೪ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ಮಟ್ಟದ ಪಂದ್ಯಾವಳಿ

ಕೋಲಾರ ಜಿಲ್ಲೆಯು ಚಿನ್ನ, ರೇಷ್ಮೆ, ಹಾಲು, ಮಾವು ಮಾತ್ರವಲ್ಲ ಕ್ರೀಡೆಗಳಲ್ಲೂ ಉತ್ತಮ ಪ್ರತಿಭೆಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದೆ, ಬ್ಯಾಸ್ಕೆಟ್ ಬಾಲ್ ರಾಜ್ಯ ಮಟ್ಟದ ಪಂದ್ಯಾವಳಿಯನ್ನು ಕೋಲಾರದಲ್ಲಿ ಆಯೋಜಿಸುವ ಚಿಂತನೆ ಇದೆ. ಯಾವುದೇ ಕ್ರೀಡೆ ನಿರಂತವಾಗಿ ಆಭ್ಯಾಸ ಮಾಡುತ್ತಿದ್ದರೆ ಜೀವನದಲ್ಲಿ ಮಾಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯದಿಂದ ಇರಲು ಸಾಧ್ಯ. ತಾವು ಬೆಳಗಿನ ವೇಳೆ ಯೋಗ ಆಭ್ಯಾಸ ಮಾಡುವುದರಿಂದ ದಿನವನ್ನು ಉತ್ಸಾಹದಿಂದ ಕಳೆಯಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ಕ್ರೀಡಾಕೂಟದಲ್ಲಿ ರಾಜ್ಯದ ೨೫ ಜಿಲ್ಲೆಗಳಿಂದ ಸುಮಾರು ೭೦೦ಕ್ಕೂ ಹೆಚ್ಚು ಕ್ರೀಡಾ ಪಟುಗಳು ೩೦ ರಿಂದ ೯೫ ವರ್ಷದ ವಯೋಮಾನದವರು ಭಾಗವಹಿಸಿರುವುದು ಅಭಿನಂದನಾರ್ಹ, ಆರೋಗ್ಯದಲ್ಲಿ ಏನೇ ಸಮಸ್ಯೆಗಳಿದ್ದರೂ ಸಹ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿನ ಉತ್ಸಾಹ ಪ್ರದರ್ಶಿಸಿರುವುದು ಶ್ಲಾಘನೀಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಚಿನ್ನದಂತ ಹೃದಯವಂತರಿದ್ದಾರೆ

ಕೋಲಾರ ಜಿಲ್ಲೆಗೆ ರಾಜ್ಯದ ಗಡಿ ಜಿಲ್ಲೆಗಳಿಂದ ಆಗಮಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದನ್ನು ಸ್ವಾಗತಿಸಿದ ಅವರು, ಕೋಲಾರ ಜಿಲ್ಲೆಯಲ್ಲಿ ಚಿನ್ನ ಬರಿದಾದರೂ ಚಿನ್ನದಂತ ಹೃದಯವಂತರು ಇದ್ದಾರೆ, ವಿಶ್ವಕ್ಕೆ ಚಿನ್ನ, ಹಾಲು, ರೇಷ್ಮೆ, ಮಾವು ನೀಡಿದಂತ ಖ್ಯಾತ ಜಿಲ್ಲೆಯಾಗಿದೆ. ಸಂಸ್ಕೃತಿ, ಸಂಸ್ಕಾರಗಳ ಜೊತೆಗೆ ಕ್ರೀಡಾ ಜೀವನ ಅಳವಡಿಸಿಕೊಂಡಿರುವ ಜಿಲ್ಲೆಯಾಗಿದೆ ಎಂದರು.ರಾಜ್ಯದ ಬೆಳಗಾವಿ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಉತ್ತರ ಕನ್ನಡ, ಧಾರವಾಡ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

ಅಸೋಸಿಯೇಷನ್ ಅಧ್ಯಕ್ಷ ವಿ.ಕೃಷ್ಣರೆಡ್ಡಿ, ಅಂತರರಾಷ್ಟ್ರೀಯ ಕ್ರೀಡಾಪಟು ಹಾಗೂ ಕಾರ್ಯದರ್ಶಿ ವಿ.ಮಾರಪ್ಪ, ಡಿ.ಐ.ಸಿ ಉಪನಿರ್ದೇಶಕ ರವಿಚಂದ್ರನ್, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎನ್.ವಿಜಯಲಕ್ಷ್ಮೀ, ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಟಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್. ಕಾರ್ಯದರ್ಶಿ ಹೆಚ್.ಸಿ.ಷಣ್ಮುಗಂ, ಜಿಲ್ಲಾ ಖಜಾಂಜಿ ಕೆ.ಟಿ.ಸುರೇಶ್‌ಬಾಬು, ಜಿಲ್ಲಾ ಉಪಾಧ್ಯಕ್ಷ ಡಾ.ಜಿ.ಮುನಿಕೃಷ್ಣ ಇದ್ದರು. .

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''