ಕನ್ನಡಪ್ರಭ ವಾರ್ತೆ ಮಡಿಕೇರಿ
ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಕೊಡಗಿನ ಜನರು ಕ್ರೀಡಾ ಕ್ಷೇತ್ರವನ್ನು ಹೆಚ್ಚು ಗೌರವಿಸುತ್ತಾರೆ. ನಾಡಿನ ಕ್ರೀಡಾಪಟುಗಳು ಹಾಕಿ ಸೇರಿದಂತೆ ಇತರೆ ಕ್ರೀಡೆಯಲ್ಲಿಯೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ಕ್ರೀಡಾಕ್ಷೇತ್ರದ ಬೆಳವಣಿಗೆಗೆ ಹೆಚ್ಚಿನ ಅವಕಾಶ ಕಲ್ಪಿಸಿದೆ. ಆ ದಿಸೆಯಲ್ಲಿ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಯಶಸ್ಸಿನತ್ತ ಗಮನ ಹರಿಸಬೇಕು ಎಂದರು.ಕೊಡಗು ಜಿಲ್ಲೆಯ ಪ್ರತಿ ಹೋಬಳಿಯಲ್ಲಿ ಕ್ರೀಡಾಂಗಣ ಪುನಃಶ್ಚೇತನಕ್ಕೆ ತಲಾ 25 ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಕೆಲವು ಕಡೆಗಳಲ್ಲಿ ಕ್ರೀಡಾಂಗಣ ಅಭಿವೃದ್ಧಿ ಆಗಿದೆ ಎಂದು ಶಾಸಕ ಪೊನ್ನಣ್ಣ ತಿಳಿಸಿದರು.
ಪೊನ್ನಂಪೇಟೆ ಪ.ಪಂ. ಅಧ್ಯಕ್ಷ ಅಣ್ಣೀರ ಎಂ. ಹರೀಶ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬಿಸಿ ಉಪಾಧ್ಯಕ್ಷ ಮೂಕಳೇರ ಕುಶಾಲಪ್ಪ, ಪ್ರಮುಖರಾದ ಪಿ.ಕೆ. ಪೊನ್ನಪ್ಪ, ಮಾದಂಡ ತಿಮ್ಮಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕದಸಿ. ರಂಗಧಾಮಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಆರ್.ರವಿ, ಡಾ.ಬಿ.ಸಿ. ದೊಡ್ಡೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯ ಪರಿವೀಕ್ಷಕರಾದ ಬಿಂದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಇತರರು ಇದ್ದರು.
ಮಡಿಕೇರಿ: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಬುಧವಾರ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ರಾಜ್ಯಮಟ್ಟದ ಶೈಕ್ಷಣಿಕ ಹಾಕಿ ಟೂರ್ನಿಯ 17 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲೂ ಮೈಸೂರು ವಿಭಾಗ ತಂಡವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವು.
ಇದಕ್ಕೂ ಮೊದಲು ನಡೆದ ಪಂದ್ಯಗಳಲ್ಲಿ ಬೆಳಗಾವಿ ವಿಭಾಗ ತಂಡವು ಕಲಬುರಗಿ ವಿಭಾಗ ತಂಡವನ್ನು 5- 2 ಗೋಲುಗಳಿಂದ, ಬಾಲಕರ ವಿಭಾಗದಲ್ಲಿ ಬೆಳಗಾವಿ ತಂಡ ಬೆಂಗಳೂರು ತಂಡವನ್ನು 5- 1 ಗೋಲುಗಳ ಅಂತರದಿಂದ ಸೋಲಿಸಿತು.