ಲಕ್ಷ್ಮೇಶ್ವರದಲ್ಲಿ ಜೂನ್‌ 29ರಂದು ರಾಜ್ಯ ಮಟ್ಟದ ಮುಕ್ತ ಚೆಸ್‌ ಪಂದ್ಯಾವಳಿ

KannadaprabhaNewsNetwork |  
Published : Jun 13, 2025, 03:33 AM IST
ಪೊಟೋ-ರಾಜ್ಯ ಮಟ್ಟದ ಮುಕ್ತ ಚಸ್ ಪಂದ್ಯಾವಳಿಯ ಕುರಿತ ಪೂರ್ವಬಾವಿ ಸಭೆಯಲ್ಲಿ ಬಾಬುರಾವ್ ವೇರ್ಣೇಕರ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ಮಕ್ಕಳು ಚೆಸ್ ಕ್ರೀಡೆಯಲ್ಲಿ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು 2025ರ ಜೂನ್ 29ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಗಿರೀಶ ಅಗಡಿ ಹೇಳಿದರು.

ಲಕ್ಷ್ಮೇಶ್ವರ: ಜಿಲ್ಲೆಯ ಮಕ್ಕಳು ಚೆಸ್ ಕ್ರೀಡೆಯಲ್ಲಿ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯನ್ನು 2025ರ ಜೂನ್ 29ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಗಿರೀಶ ಅಗಡಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯ ಕುರಿತು ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯ ಮಟ್ಟದ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ 3 ವಿಭಾಗಗಳನ್ನಾಗಿ ವಿಂಗಡಣೆ ಮಾಡಲಾಗಿದ್ದು, 1ನೇ ವಿಭಾಗದಲ್ಲಿ 17 ವರ್ಷದೊಳಗಿನ ಬಾಲಕರು ಮತ್ತು ಬಾಲಕಿಯರು. 2ನೇ ವಿಭಾಗದಲ್ಲಿ 13 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಹಾಗೂ 3ನೇ ವಿಭಾಗದ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಎಲ್ಲ ವಯೋಮಾನದ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದೆ ಎಂದು ಅವರು ಹೇಳಿದರು.

ಈ ವೇಳೆ ದೈಹಿಕ ಶಿಕ್ಷಣ ಶಿಕ್ಷಕ ಎಂ.ಐ. ಕಣಕೆ ಮಾತನಾಡಿ, ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ಮಕ್ಕಳಿಗೆ ಸೂಕ್ತ ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಅಲ್ಲದೆ ರಾಷ್ಟ್ರ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಮಕ್ಕಳಿಗೆ ಈ ಕ್ರೀಡಾಕೂಟವು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ಭಾಗವಹಿಸುವವರು ತಮ್ಮ ಹೆಸರು ನೊಂದಾಯಿಸಲು ಈ ಕೆಳಗಿನ ವ್ಯಕ್ತಿಗಳನ್ನು ಸಂಪರ್ಕಿಸಲು ಕೋರಿದೆ. ಪ್ರಮೋದರಾಜ್ ಮೋರೆ -9844042170 ಹಾಗೂ ಎಂ.ಐ. ಕಣಕೆ- 9945859815. ಈ ವೇಳೆ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಗೌರವಾಧ್ಯಕ್ಷ ಬಾಬುರಾವ್ ವರ್ಣೇಕರ ಮಾತನಾಡಿದರು.

ಪೂರ್ವಭಾವಿ ಸಭೆಯಲ್ಲಿ ಎಸ್.ಎಂ. ಉಮ್ಮಣ್ಣವರ, ಎಎಸ್‌ಐ ನಿಸಾರ್ ಅಹ್ಮದ ಮೌಲ್ವಿ ಮಂಜುನಾಥ ಅಂಗಡಿ, ಶ್ರೀಕಾಂತ ಪೂಜಾರ, ಎ.ಜಿ. ಬೂದಿಹಾಳ, ರಮೇಶ ಗಾಂಜಿ, ಎಸ್.ಪಿ. ಕಟ್ಟೆಣ್ಣವರ ಇದ್ದರು. ಆದೇಶ ಹುಲಗೂರ ಸ್ವಾಗತಿಸಿ, ವಂದಿಸಿದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ