ಒಳ ಮೀಸಲಾತಿ ಕುರಿತು ನಾಳೆ ರಾಜ್ಯಮಟ್ಟದ ವಿಚಾರಸಂಕಿರಣ: ಡಾ. ಸಾಗರ್

KannadaprabhaNewsNetwork |  
Published : Mar 22, 2025, 02:02 AM IST
ಫೋಟೋ: 21 ಹೆಚ್‌ಎಸ್‌ಕೆ 1ಹೋರಾಟಗಾರ ಹಾಗೂ ವಕೀಲ ಡಾ.ಡಿ.ಜಿ.ಸಾಗರ್ ಭಾವಚಿತ್ರ | Kannada Prabha

ಸಾರಾಂಶ

ಒಳಮೀಸಲಾತಿ ವಿಚಾರವಾಗಿ ನ್ಯಾಯಮೂರ್ತಿಗಳಾದ ನಾಗಮೋಹನ ದಾಸ್ ಎಚ್.ಎನ್ ಅವರ ಏಕ ಸದಸ್ಯ ವಿಚಾರ ಆಯೋಗ ಅಧ್ಯಕ್ಷರಿಗೆ ಮನವಿ ಸಲ್ಲಿಸುವುದರ ಜೊತೆಗೆ ಮಧ್ಯಾಹ್ನ 2.30 ಗಂಟೆಗೆ ರಾಜ್ಯಮಟ್ಟದ ವಿಚಾರ ಸಂಕಿರಣ ಪ್ರಾರಂಭವಾಗಲಿದೆ.

ಹೊಸಕೋಟೆ: ಸುಪ್ರೀಂಕೋರ್ಟ್ ಆದೇಶದಂತೆ ಒಳಮೀಸಲಾತಿ ಹಂಚಿಕೆಗೆ ಬೇಕಾಗಿರುವ ದತ್ತಾಂಶವನ್ನು ಸಂಗ್ರಹಿಸಲು ಹೊಸ ಸಮೀಕ್ಷೆಯೇ ಅಂತಿಮ ವಿಧಾನವಾಗಿರುವ ಕಾರಣ ಒಳಮೀಸಲಾತಿ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಮಾ.23ರ ಭಾನುವಾರದಂದು ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಹೋರಾಟಗಾರ ಹಾಗೂ ಹಿರಿಯ ವಕೀಲ ಡಾ.ಡಿ.ಜಿ.ಸಾಗರ್ ತಿಳಿಸಿದರು.

ನಗರದಲ್ಲಿ ಸಂಘಟನೆಯ ಪದಾಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹಂಚಿಕೆ ವಿಚಾರವು ಸಂವಿಧಾನಾತ್ಮಕ, ರಾಜಕೀಯ ಸಂಗತಿಯಾಗಿದ್ದು, ಆ ಮೂಲಕವೇ ಈ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಸಾಧ್ಯವಿದೆ. ಕರ್ನಾಟಕದ ಪರಿಶಿಷ್ಟರ 101 ಉಪಜಾತಿಗಳ, ಜಾತಿಗಣತಿ ಸಮೀಕ್ಷೆಯನ್ನು ಹೊಸದಾಗಿ, ಸಮಗ್ರವಾಗಿ, ವೈಜ್ಞಾನಿಕವಾಗಿ, ಪಾರದರ್ಶಕವಾಗಿ ಮಾಡಬೇಕೆಂದು ಹಾಗೂ 101 ಒಳಜಾತಿಗಳ ನೈಜ ಮತ್ತು 2 ಸದಸ್ಯರ ತಲೆ ಎಣಿಕೆಯ ಮಾಹಿತಿ ಸಂಗ್ರಹಿಸುವ ಹೊಸ ಸಮೀಕ್ಷೆಯನ್ನು ಮಾಡುವ ಮೂಲಕ ಮೇಲಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.

ದಲಿತ ಸಂಘರ್ಷ ಸಮಿತಿ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ ಮಾತನಾಡಿ, ಒಳಮೀಸಲಾತಿ ವಿಚಾರವಾಗಿ ನ್ಯಾಯಮೂರ್ತಿಗಳಾದ ನಾಗಮೋಹನ ದಾಸ್ ಎಚ್.ಎನ್ ಅವರ ಏಕ ಸದಸ್ಯ ವಿಚಾರ ಆಯೋಗ ಅಧ್ಯಕ್ಷರಿಗೆ ಮನವಿ ಸಲ್ಲಿಸುವುದರ ಜೊತೆಗೆ ಮಧ್ಯಾಹ್ನ 2.30 ಗಂಟೆಗೆ ರಾಜ್ಯಮಟ್ಟದ ವಿಚಾರ ಸಂಕಿರಣ ಪ್ರಾರಂಭವಾಗಲಿದೆ. ಇದರಲ್ಲಿ ಕುಲಬಾಂಧವರು, ವಿಚಾರವಂತರು, ಗಣ್ಯರು, ವಕೀಲರು, ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಕರ್ನಾಟಕ ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಲೋಕೇಶ್, ತಾಲೂಕು ಸಂಚಾಲಕ ಎಸ್.ನಾರಾಯಣಸ್ವಾಮಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ