ಕನ್ನಡಪ್ರಭ ವಾರ್ತೆ ನಾಗಮಂಗಲ
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಮಂದಿ ಜಾನಪದ ಕಲಾವಿದರು ಶ್ರೀಕ್ಷೇತ್ರದಲ್ಲಿ ಸಂಗಮಗೊಂಡು ವಿವಿಧ ಬಗೆಯ ಜಾನಪದ ಪ್ರಕಾರಗಳ ಪ್ರದರ್ಶನ ನೀಡಿದರು. ನಮ್ಮ ಪೂರ್ವಿಕರ ಬಾಯಿಂದ ಬಾಯಿಗೆ ಜನರಿಂದ ಜನರಿಗೆ ಪಸರಿಸಿದ ಜಾನಪದ ಸೊಗಡಿನ ಕಲೆಗಳಾದ ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ ಕುಣಿತ, ಪಟದ ಕುಣಿತ, ಕೋಲಾಟ ಸೇರಿದಂತೆ ಉತ್ತರ ಕರ್ನಾಟಕದ ಹತ್ತಾರು ಬಗೆಯ ಕಲಾ ಪ್ರದರ್ಶನಗಳು ಕ್ಷೇತ್ರದಲ್ಲಿ ಮೇಳೈಸಿದವು.
ಭವ್ಯ ಮೆರವಣಿಗೆ:ಸಮಾರಂಭಕ್ಕೂ ಮುನ್ನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಸ್ವಾಮೀಜಿ ಹಾಗೂ ಐದು ಮಂದಿ ಚುಂಚಶ್ರೀ ಪ್ರಶಸ್ತಿ ಪುರಸ್ಕೃತರನ್ನು ಬೆಳ್ಳಿ ಮಾದರಿಯ ಎರಡು ಸಾರೋಟಿನಲ್ಲಿ ಕೂರಿಸಿ ವಿವಿಧ ಜಾನಪದ ಕಲಾತಂಡ ಮತ್ತು ಪೂರ್ಣಕುಂಭ ಹೊತ್ತ ಮಹಿಳೆಯರು ಶ್ರೀಮಠದ ರಥದ ಬೀದಿಯಿಂದ ಜೋಡಿ ರಸ್ತೆ ಮಾರ್ಗವಾಗಿ ವೇದಿಕೆವರೆಗೆ ಭವ್ಯ ಮೆರವಣಿಗೆಯಲ್ಲಿ ಕರೆತರಲಾಯಿತು.
ಭೈರವೈಕ್ಯಶ್ರೀ ಡಾ.ಬಾಲಗಂಗಾಧರನಾಥಶ್ರೀಗಳು ತಮ್ಮ ಪಟ್ಟಾಭಿಷೇಕ ಮಹೋತ್ಸವಕ್ಕೆ ಆಯ್ಕೆ ಮಾಡಿಕೊಂಡಿದ್ದರು. ಹಾಗಾಗಿ ಕಳೆದ 45 ವರ್ಷಗಳ ಹಿಂದೆ ಆರಂಭಗೊಂಡ ಈ ಜಾನಪದ ಕಲಾಮೇಳ ನಿರಂತರವಾಗಿ ಮುನ್ನಡೆಸುವ ಮೂಲಕ ಈ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಶ್ರೀಮಠ ಮಾಡುತ್ತಿದೆ ಎಂದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಪ್ರಧಾನಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಮೈಸೂರು ಶಾಖಾಮಠದ ಸೋಮನಾಥ ಸ್ವಾಮೀಜಿ, ಬೆಂಗಳೂರು ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹೀ.ಚಿ. ಬೋರಲಿಂಗಯ್ಯ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಆದಿಚುಂಚನಗಿರಿ ವಿವಿ ಉಪ ಕುಲಪತಿ ಡಾ.ಎಸ್.ಎನ್.ಶ್ರೀಧರ, ಖ್ಯಾತ ಗಾಯಕ ಶಶಿಧರ್ ಕೋಟೆ, ಡಿವೈಎಸ್ಪಿ ಬಿ.ಚಲುವರಾಜು, ಸಿಪಿಐ ನಿರಂಜನ್, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು ಸೇರಿದಂತೆ ಹಲವರು ಇದ್ದರು.