ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿವಿಧ ತರಗತಿ ಪ್ರವೇಶಾತಿ ಆರಂಭ

KannadaprabhaNewsNetwork |  
Published : Jul 24, 2024, 12:22 AM IST
32 | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2024ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು ‘ನಿಮ್ಮ ಮನೆಯೇ ನಿರಂತರ ಪಾಠಶಾಲೆ’ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2024ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಮುಕ್ತ ವಿಶ್ವವಿದ್ಯಾಲಯವು ‘ನಿಮ್ಮ ಮನೆಯೇ ನಿರಂತರ ಪಾಠಶಾಲೆ’ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ (ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲೂ) ಹಾಗು ಸ್ನಾತಕೋತ್ತರ ಪಿ.ಜಿ. ಕೋರ್ಸ್‌ಗಳಾದ (ಎಂ.ಎ, ಎಂ.ಎ- ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್‌ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್,ಡಬ್ಲೂ) (ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್) ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.ಪ್ರವೇಶಾತಿಗೆ ಎಸ್‌ಎಸ್‌ಲ್‌ಸಿ, ಪಿ.ಯು.ಸಿ, ತತ್ಸಮಾನ, ಪದವಿ ಅಂಕಪಟ್ಟಿ ಪ್ರತಿ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್‌ಗಳ ಪ್ರತಿ), ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ ಹೆಸರು, ಐಎಫ್‌ಎಸ್‌ಸಿ ಕೋಡ್, ನಾಲ್ಕು ಫೋಟೋಗಳ, ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್ / ಫೋನ್ ಪೇ/ ಗೂಗಲ್ ಪೇ / ನೆಟ್ ಬ್ಯಾಂಕಿಂಗ್ - ಶುಲ್ಕ ಪಾವತಿ. ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9844395986, 8296215714, 9483570900, 7411233007 ಸಂಪರ್ಕಿಸಬಹುದಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರದಲ್ಲಿ ಪ್ರಾರಂಭವಾದ ಮೆಕ್ಕೆಜೋಳ ಖರೀದಿ, ಮುಗಿಯದ ಗೊಂದಲ!
ವಿಶ್ವಕರ್ಮ ಮಹಾ ಒಕ್ಕೂಟ ಜಿಲ್ಲಾ ಘಟಕ ಉದ್ಘಾಟನೆ