ಕನ್ನಡಪ್ರಭ ವಾರ್ತೆ ಶಿವಮೊಗ್ಗ
ವಿಜಯೇಂದ್ರ ಆಗಮನ ಹಿನ್ನೆಲೆಯಲ್ಲಿ ಇಡೀ ನಗರದಲ್ಲಿ ಹಬ್ಬದ ವಾತಾವರಣ ಉಂಟಾಗಿತ್ತು. ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ಎಲ್ಲೆಡೆ ಕಟೌಟ್ ಹಾಗೂ ಫ್ಲೆಕ್ಸ್ಗಳನ್ನು ಹಾಕಿ ಸ್ವಾಗತ ಕೋರಿದರು.
ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು, ಪ್ರಧಾನಿಯವರ ಕಟೌಟ್ಗಳು ಕೂಡ ನಗರದಲ್ಲಿ ರಾರಾಜಿಸಿದವು. ಬೆಳಗಿನ ಜಾವ ರೈಲಿನಲ್ಲಿ ಬಂದ ಅವರನ್ನು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.ಬೆಳಗ್ಗೆ 9 ಗಂಟೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿದರು. ಈ ಸಂದರ್ಭ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಚಂಡೆ ತಂಡ ಇತ್ತು. ನೂತನ ರಾಜ್ಯಾಧ್ಯಕ್ಷರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಕಾರ್ಯಕರ್ತರು ಘೋಷಣೆ ಕೂಗಿದರು. ವಿಜಯೇಂದ್ರಗೆ ಆರತಿ ಬೆಳಗಿ ಬಿಜೆಪಿ ಕಚೇರಿಯೊಳಗೆ ಸ್ವಾಗತಿಸಲಾಯಿತು. ಬಿಜೆಪಿ ಕಚೇರಿಯನ್ನು ಚಪ್ಪರ, ತಳಿರು-ತೋರಣದಿಂದ ಅಲಂಕರಿಸಲಾಗಿತ್ತು.
ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಇರೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮಿಸೋಣ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಅಭ್ಯರ್ಥಿಗಳು ಗೆಲ್ಲಬೇಕು ಎಂದು ತಿಳಿಸಿದರು.
ಈಶ್ವರಪ್ಪ- ಸಂಘ ಪ್ರಮುಖರ ಮನೆಗೆ ಭೇಟಿ:
ಬಳಿಕ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ನಲ್ಲಿರುವ ಮಾಜಿ ಸಚಿವ ಕೆ.ಎಸ್.ಈ. ನಿವಾಸಕ್ಕೆ ಭೇಟಿ ನೀಡಿ, ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದುಕೊಂಡರು. ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ವೇಳೆ ಈಶ್ವರಪ್ಪ ಅವರಿಗೆ ಶಾಲು ಹೊದಿಸಿ, ಬಿ.ವೈ.ವಿಜಯೇಂದ್ರ ಅವರು ಸನ್ಮಾನ ಮಾಡಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮಮ್ಮ ಶುಭ ಕೋರಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಜಯಘೋಷ ಕೂಗಿದರು.
ಬೆಕ್ಕಿನ ಕಲ್ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದ ನಂತರ ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಬೈಕ್, ಕಾರ್ ರ್ಯಾಲಿಯೊಂದಿಗೆ ಪೆಸಿಟ್ ಕಾಲೇಜಿಗೆ ಕರೆತರಲಾಯಿತು. ಬೆಕ್ಕಿನ ಕಲ್ಮಠ ಬಳಿ ಜೆಸಿಬಿ ಮೂಲಕ ಬೃಹತ್ ಸೇಬಿನ ಹಾರ ಹಾಕಲಾಯಿತು. ಪೆಸಿಟ್ ಕಾಲೇಜಿನ ಸಭಾಂಗಣಕ್ಕೆ ಬರುತ್ತಿದ್ದಂತೆ ಮಂಗಳವಾದ್ಯ ಮೊಳಗಿಸಲಾಯಿತು. ಈ ಸಂದರ್ಭ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯ ಡಿ.ಎಸ್. ಅರುಣ್, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಹಲವರು ಜಾಥಾದಲ್ಲಿ ಭಾಗವಹಿಸಿದ್ದರು.
- - - -29ಎಸ್ಎಂಜಿಕೆಪಿ06:
ಶಿವಮೊಗ್ಗಕ್ಕೆ ಬುಧವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನಗರದ ಬೆಕ್ಕಿನಕಲ್ಮಠದಿಂದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ಡಿ.ಎಸ್.ಅರುಣ್, ಗುರುಮೂರ್ತಿ ಇತರರು ಇದ್ದರು.- - --29ಎಸ್ಎಂಜಿಕೆಪಿ07:
ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಿಂದ ತೆರೆದ ವಾಹನದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮೆರವಣಿಗೆಯಲ್ಲಿ ಅಪಾರ ಸಂಖ್ಯೆ ಕಾರ್ಯಕರ್ತರು ಬೈಕ್ಗಳಲ್ಲಿ ಭಾಗವಹಿಸಿದರು.