ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು

KannadaprabhaNewsNetwork |  
Published : Feb 08, 2026, 03:30 AM IST
ಬೆಳಗಾವಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ರೈಲ್ವೆ ಸೇರಿ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ. ಆದರೆ, ರಾಜ್ಯ ಸರ್ಕಾರ ನಿಗದಿತ ಭೂಮಿ ಸ್ವಾಧೀನ ಮಾಡಿ ಕೊಡುವಲ್ಲಿ ಹಿಂದೇಟು ಹಾಕುತ್ತಿದೆ. ಇದರಿಂದ ಯೋಜನೆಗಳು ಕುಂಟುತ್ತ ಸಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ರಾಜ ಆಗಿದ್ದಾರೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರೈಲ್ವೆ ಸೇರಿ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ. ಆದರೆ, ರಾಜ್ಯ ಸರ್ಕಾರ ನಿಗದಿತ ಭೂಮಿ ಸ್ವಾಧೀನ ಮಾಡಿ ಕೊಡುವಲ್ಲಿ ಹಿಂದೇಟು ಹಾಕುತ್ತಿದೆ. ಇದರಿಂದ ಯೋಜನೆಗಳು ಕುಂಟುತ್ತ ಸಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ರಾಜ ಆಗಿದ್ದಾರೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಆರೋಪಿಸಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಮಾರ್ಗ, ಶಿವಮೊಗ್ಗ-ರಾಣೆಬೆನ್ನೂರ, ಶಿವಮೊಗ್ಗ- ಹರಿಹರ, ವೈಟ್‌ಫೀಲ್ಡ್‌-ಕೀಲಾರ, ಹಾಸನ-ಬೇಲೂರು, ತುಮಕೂರು- ದಾವಣಗೆರೆ, ಹುಬ್ಬಳ್ಳಿ-ಅಂಕೋಲಾ ಮಾರ್ಗ, ರಾಮದುರ್ಗ-ಲೋಕಾಪುರ ಮಾರ್ಗ ಹೀಗೆ ಹಲವು ಯೋಜನೆಗಳಿಗೆ ಕೇಂದ್ರ ಮಂಜೂರಾತಿ ನೀಡಿದೆ. ಆದರೆ, ಬೇಕಾದ ಭೂಮಿ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎನ್ನವುದನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂದು ಟೀಕಿಸಿದರು.ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ತಮ್ಮ ತಪ್ಪನ್ನು ಒಮ್ಮೆಯಾದರೂ ಒಪ್ಪಿಕೊಂಡಿದ್ದಾರಾ? ಯಾವಾಗಲೂ ಕೇಂದ್ರದ್ದೇ ತಪ್ಪು ಎನ್ನುತ್ತಾರೆ. ಅರುಣಾಚಲ ಪ್ರದೇಶ, ಛತ್ತೀಸಗಡ, ತ್ರಿಪುರಾ, ಜಾರ್ಖಂಡ್‌ ಮುಂತಾದ ರಾಜ್ಯಗಳನ್ನು ಗಮನಿಸಬೇಕು. ಕೇಂದ್ರದ ಯೋಜನೆಗಳನ್ನು ಅವರು ಪೂರ್ಣಪ್ರಮಾಣದಲ್ಲಿ ಬಳಸಿಕೊಂಡಿದ್ದಾರೆ. ಅಂಥವರನ್ನು ನೋಡಿ ಸಿದ್ದರಾಮಯ್ಯ ಕಲಿಯಬೇಕು. ರೈಲ್ವೆ ಇಲಾಖೆ ನೇಮಕಾತಿಗಳಲ್ಲಿ ಆಯಾ ರಾಜ್ಯದ ಭಾಷೆಗಳಲ್ಲೇ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಬಡ್ತಿ ಪರೀಕ್ಷೆಗಳಿಗೆ ಪ್ರಾದೇಶಿಕ ಭಾಷೆ ಬಳಸಿಲ್ಲ. ಇದರಲ್ಲಿ ಇನ್ನಷ್ಟು ಸುಧಾರಣೆ ತರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಮಹದಾಯಿ ಯೋಜನೆಯಲ್ಲೂ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಹಲವು ಕಾಯ್ದೆಗಳನ್ನು ತಿದ್ದುಪಡಿ ಮಾಡಿ ರಾಜ್ಯಗಳಿಗೆ ಅನುಕೂಲ ಮಾಡಿದ್ದೇವೆ. ನಮ್ಮ ಸಿಎಂ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ಕೇಂದ್ರದ ವಿರುದ್ಧ ಎತ್ತಿಕಟ್ಟುವುದಕ್ಕೇ ತಮ್ಮ ಅಧಿಕಾರ ಬಳಸಿಕೊಳ್ಳುತ್ತಿದ್ದಾರೆ. ₹15 ಸಾವಿರ ಕೋಟಿಯನ್ನು ರಾಜ್ಯ ಸರ್ಕಾರ ಕೇಂದ್ರದಿಂದ ಬಡ್ಡಿ ರಹಿತ ಸಾಲ ಪಡೆದಿದೆ. ಭಾರತ್‌ ಮಾಲಾ ಯೋಜನೆಯಲ್ಲಿ ರಾಜ್ಯದಲ್ಲಿ ₹63,304 ಕೋಟಿ ಬಂಡವಾಳ ಹಾಕಿದ್ದು, 2059 ಕಿ.ಮೀ ಹೆದ್ದಾರಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ₹8 ಸಾವಿರ ಕೋಟಿಯಲ್ಲಿ ಬೆಳಗಾವಿ-ಹುಣಗುಂದ ರಾಷ್ಟ್ರೀಯ ಹೆದ್ದಾರಿಗೂ ಶಂಕುಸ್ಥಾಪನೆ ಮಾಡಲಾಗಿದೆ. ದಾಬಸಪೇಟೆ- ಹೊಸಕೋಟೆ ಲೋಕಾರ್ಪಣೆ ಆಗಿದೆ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ₹8,480 ಕೋಟಿ ವೆಚ್ಚ ಮಾಡಿ ಲೋಕಾರ್ಪಣೆ ಮಾಡಿದ್ದೇವೆ. ₹4130 ಕೋಟಿಯಲ್ಲಿ 92 ಕಿ,ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ರಸ್ತೆ, ಕೈಗಾರಿಕಾ ಕಾರಿಡಾರ್‌ ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿ ವಿಮಾನ ನಿಲ್ದಾಣಗಳಿಗೆ ಹೊಸ ಟರ್ಮಿನಲ್‌ ಕಟ್ಟಡಗಳು ಮಂಜೂರಾಗಿವೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ₹5 ಸಾವಿರ ಕೋಟಿ ಮಂಜೂರು ಮಾಡಿದ್ದೇವೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹಳಿತಪ್ಪಿದ್ದು, ಸಿದ್ದರಾಮಯ್ಯ ನಡವಳಿಕೆ, ಕಾರ್ಯವೈಖರಿ, ಭ್ರಷ್ಟಾಚಾರ ಎಲ್ಲವೂ ಶೀಘ್ರ ಆಚೆಗೆ ಬರಲಿದೆ. ರಸ್ತೆ- ರಸ್ತೆಗಳಲ್ಲಿ ಕಾಂಗ್ರೆಸಗರು ಹೊಡೆದಾಡುವ ಸ್ಥಿತಿ ಬರುತ್ತದೆ. ಸಿದ್ದರಾಮಯ್ಯರ ಮಗ ನೀಡುತ್ತಿರುವ ಹೇಳಿಕೆಗಳೇ ಇದರ ಮುನ್ಸೂಚನೆಗಳು ಎಂದು ಲೇವಡಿ ಮಾಡಿದರು.-------

ಕೋಟ್‌

ಏಳು ಹೊಸ ಹೈಸ್ಪೀಡ್ ರೈಲು ಘೋಷಣೆಯಲ್ಲಿ ಬೆಂಗಳೂರು-ಹೈದ್ರಾಬಾದ್, ಬೆಂಗಳೂರು-ಪುಣೆ ಸೇರಿವೆ. ಪುಣೆ-ಬೆಂಗಳೂರು ಕೆಲ ದಿನಗಳಲ್ಲಿ ಕೆಲಸ ಆರಂಭಿಸುತ್ತೇವೆ. ವರ್ಷದ 51 ವಾರವು ಹೊಸ ಯೋಜನೆ ಆರಂಭ ಮಾಡುತ್ತೇವೆ. ನಮ್ಮ ಮೆಟ್ರೋದಲ್ಲಿ 6 ಲಕ್ಷ ಜನರು ಓಡಾಡುತ್ತಿದ್ದಾರೆ. ನಮ್ಮ ಮೆಟ್ರೋ ಆಡಳಿತ ನಡೆಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು, ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ತಲೆ ಹಾಕಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ.ವಿ.ಸೋಮಣ್ಣ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಸಂಜಯ ಪಾಟೀಲ ಹಾಗೂ ರಮೇಶ ಕತ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸೇರಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ
‘ನಾನ್ ವೆಜ್’ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ