ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಭೇಟಿ, ಸಾಂತ್ವನ

KannadaprabhaNewsNetwork |  
Published : May 20, 2024, 01:41 AM IST
ಮೃತೆ ವಿದ್ಯಾರ್ಥಿನಿ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ , ಮೈಸೂರು ಮೇಯರ್ ಭೇಟಿ ನೀಡಿ ಸಾಂತ್ವಾನ | Kannada Prabha

ಸಾರಾಂಶ

ಯುವಕನಿಂದ ಬರ್ಬರವಾಗಿ ಹತ್ಯೆಯಾದ ಮೀನಾ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್‌ ಭೇಟಿ ನೀಡಿದರು. ಮುಂದೆ ಇಂತಹ ಕೃತ್ಯ ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನಿಂದಲೇ ಬರ್ಬರವಾಗಿ ಹತ್ಯೆಯಾದ ಮೀನಾಳ ಮನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯೂ ಆಗಿರುವ ಡಾ. ಪುಷ್ಪ ಅಮರನಾಥ್ ಅವರು ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದರು.

ಕುಂಬಾರಗಡಿಗೆಯ ಮೃತಳ ಮನೆಗೆ ತೆರಳಿದ ಅವರು, ಮೀನಾಳ ಪೋಷಕರಾದ ಸುಬ್ರಮಣಿ ಹಾಗೂ ಜಾನಕಿ ಅವರಿಗೆ ವೈಯುಕ್ತಿಕವಾಗಿ ಸಹಾಯ ಹಸ್ತ ಚಾಚಿದರು.

ಇಂತಹ ಪೈಶಾಚಿಕ ಕೃತ್ಯ ಎಸಗಿದ ಆರೋಪಿಗೆ ತಕ್ಕ ಶಿಕ್ಷೆಯಾಗಲೇಬೇಕು. ಮುಂದೆ ಇಂತಹ ಕೃತ್ಯಗಳು ಎಲ್ಲೂ ನಡೆಯಬಾರದು ಎಂದು ಆಶಯ ವ್ಯಕ್ತಪಡಿಸಿದರು. ಈ ಸಂದರ್ಭ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪವಲ್ಲಿ ಉಪಸ್ಥಿತರಿದ್ದರು.

----------------

ಮೊಬೈಲ್ ಪತ್ತೆ ಹಚ್ಚಿದ ಸೈಬರ್ ಅಪರಾಧ ಠಾಣೆ ಪೊಲೀಸರು

ಮಡಿಕೇರಿ: ಆಟೋರಿಕ್ಷಾದಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ನ್ನು ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಎರಡು ತಿಂಗಳ ಹಿಂದೆ ಮಡಿಕೇರಿ ಮಾರುಕಟ್ಟೆ ವ್ಯಾಪಾರಿ ಎಂ.ಎ.ರಜಾ಼ಕ್ ಅವರು ಶ್ರೀ ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ಆಟೋರಿಕ್ಷಾವೊಂದರಲ್ಲಿ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ಈ ಬಗ್ಗೆ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎರಡು ತಿಂಗಳ ತನಿಖೆಯ ನಂತರ ಮೊಬೈಲ್ ಫೋನ್ ಪತ್ತೆಯಾಗಿದ್ದು, ಠಾಣಾಧಿಕಾರಿ ಶ್ರೀಕಾಂತ್ ಅವರು ಶನಿವಾರ ಎಂ.ಎ.ರಜಾ಼ಕ್ ಅವರಿಗೆ ಹಸ್ತಾಂತರಿಸಿದರು.

ಪೊಲೀಸರ ಕಾರ್ಯದಕ್ಷತೆಯ ಬಗ್ಗೆ ರಜಾ಼ಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೈಬರ್ ಅಪರಾಧ ಠಾಣೆಯ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!