ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಎಸ್‌ಐ ಲಕ್ಕಪ್ಪ ಕಿವಿಮಾತು

KannadaprabhaNewsNetwork |  
Published : Aug 24, 2025, 02:00 AM IST
31 | Kannada Prabha

ಸಾರಾಂಶ

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಓದಿದ ಕಾಲೇಜು ಬೋಧಿಸಿದ ಅಧ್ಯಾಪಕರ ಬಗ್ಗೆ ಪ್ರೀತಿ ಮತ್ತು ಅಭಿಮಾನ ಇರಲಿ.

ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯಾರ್ಥಿಗಳು ಕೆಟ್ಟವರ ಪ್ರಭಾವದಿಂದ ದುಶ್ಚಟಗಳಿಗೆ ಬಲಿಯಾಗಬಾರದು. ಸತತ ಅಧ್ಯಯನದಿಂದ ಜ್ಞಾನ ಸಂಪಾದಿಸಿ ಉದ್ಯೋಗ ಪಡೆಯುವತ್ತ ಗಮನಕೊಡಬೇಕು ಎಂದು ಎಸ್‌ಐ ಲಕ್ಕಪ್ಪ ಹೇಳಿದರು.

ನಗರದ ಯುವರಾಜ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೆಟ್ಟವರ ಪ್ರಭಾವದಿಂದ ದುಶ್ಚಟಗಳಿಗೆ ಬಲಿಯಾಗಬೇಡಿ, ಪ್ರತಿದಿನ ನಿಮ್ಮ ತಂದೆ ತಾಯಿ, ಕುಟುಂಬ ನಿಮ್ಮ ಭವಿಷ್ಯಕ್ಕಾಗಿ ಪಡುವ ಶ್ರಮವನ್ನು ಅರ್ಥಮಾಡಿಕೊಂಡು ಶ್ರದ್ದೆಯಿಂದ ವಿದ್ಯಾಭ್ಯಾಸ ಮುಗಿಸಿ. ಗುರು ಹಿರಿಯರ ಬಗ್ಗೆ ಗೌರವದಿಂದ ನಡೆದುಕೊಳ್ಳಿ ಎಂದರು.

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಓದಿದ ಕಾಲೇಜು ಬೋಧಿಸಿದ ಅಧ್ಯಾಪಕರ ಬಗ್ಗೆ ಪ್ರೀತಿ ಮತ್ತು ಅಭಿಮಾನ ಇರಲಿ ಎಂದರು.

ಪ್ರಾಂಶುಪಾಲ ಪ್ರೊ.ಎಸ್. ಮಹಾದೇವ ಮೂರ್ತಿ, ಆಡಳಿತಾಧಿಕಾರಿ ಪ್ರೊ.ಕೆ. ಅಜಯಕುಮಾರ್, ಪರೀಕ್ಷಾಂಗ ನಿಯಂತ್ರಣಾಧಿಕಾರಿ ಪ್ರೊ. ನಾಗೇಶ್ ಬಾಬು, ಅಭಿವಿನ್ಯಾಸ ಕಾರ್ಯಕ್ರಮದ ಸಂಯೋಜಕ ಪ್ರೊ. ಕೃಷ್ಣಮೂರ್ತಿ, ಡಾ. ಮಂಜುಳಾ, ಡಾ. ಶೇಖರ್ ನಾಯಕ್ ಮೊದಲಾದವರು ಇದ್ದರು. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ