ದುರಾಸೆ, ದುಶ್ಚಟಗಳಿಂದ ದೂರವಿದ್ದು ಸನ್ಮಾರ್ಗದಲ್ಲಿ ನಡೆಯಿರಿ-ಸ್ವಾಮೀಜಿ

KannadaprabhaNewsNetwork |  
Published : Sep 02, 2026, 03:15 AM IST
ಹಿರೇಕೆರೂರು ತಾಲೂಕಿನ ಚಿಕ್ಕೇರೂರ ಗ್ರಾಮದ ವಿರಕ್ತಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಹಮ್ಮಿಕೊಂಡಿದ್ದ 8ನೇ ಮಾಸಿಕ ಶಿವಾನುಭವಗೋಷ್ಠಿ ಹಾಗೂ ಶ್ರಾವಣ ಸಂಭ್ರಮ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಮನುಷ್ಯನ ದುರಾಸೆ ದುಶ್ಚಟಗಳಿಂದ ದೂರವಿದ್ದುಕೊಂಡು, ಸನ್ಮಾರ್ಗದಲ್ಲಿ ಜೀವನ ಸಾಗಿಸುವ ಜತೆಗೆ ಪರೋಪಕಾರ, ಕಾಯಕ ನಿಷ್ಠೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಾರ್ಥಕ ಜೀವನ ರೂಪಿಸಿಕೊಳ್ಳಬೇಕು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಹಿರೇಕೆರೂರು: ಮನುಷ್ಯನ ದುರಾಸೆ ದುಶ್ಚಟಗಳಿಂದ ದೂರವಿದ್ದುಕೊಂಡು, ಸನ್ಮಾರ್ಗದಲ್ಲಿ ಜೀವನ ಸಾಗಿಸುವ ಜತೆಗೆ ಪರೋಪಕಾರ, ಕಾಯಕ ನಿಷ್ಠೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಾರ್ಥಕ ಜೀವನ ರೂಪಿಸಿಕೊಳ್ಳಬೇಕು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಚಿಕ್ಕೇರೂರ ಗ್ರಾಮದ ವಿರಕ್ತಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಹಮ್ಮಿಕೊಂಡಿದ್ದ 8ನೇ ಮಾಸಿಕ ಶಿವಾನುಭವಗೋಷ್ಠಿ ಹಾಗೂ ಶ್ರಾವಣ ಸಂಭ್ರಮ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಬದಲಾವಣೆ ವ್ಯಕ್ತಿಯ ಬದಲಾವಣೆಯಿಂದ ಸಮಾಜ ಹಾಗೂ ನಾಡಿನ ಸಾಧ್ಯವಾಗುತ್ತದೆ. ಇಂದಿನ ದಿನಮಾನಗಳಲ್ಲಿ ಮನುಷ್ಯ ದಾರಿ ತಪ್ಪುತ್ತಿರುವುದಕ್ಕೆ ಸಂಪತ್ತು, ದ್ವೇಷ ಮತ್ತು ಅಸೂಯೆ ಪ್ರಮುಖ ಕಾರಣಗಳಾಗಿವೆ. ಇವುಗಳ ಹಿಂದೆ ಓಡದೇ, ಆದರ್ಶದ ಹಾದಿಯಲ್ಲಿ ಮನುಷ್ಯ ಜೀವನ ನಡೆಸಿ ಬಾಳನ್ನು ಬೆಳಗಿಸಿಕೊಳ್ಳಬೇಕು. ಎಂದರು.

ತಿಪ್ಪಾಯಿಕೊಪ್ಪದ ಮಹಾಂತಸ್ವಾಮೀಜಿ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಶ್ರಾವಣ ಮಾಸಕ್ಕೆ ಅತ್ಯಂತ ಮಹತ್ವವಿದ್ದು, ಶ್ರಾವಣ ಮಾಸದ ಸಂದರ್ಭದಲ್ಲಿ ಭಕ್ತರು ಧಾರ್ಮಿಕ ಆಚರಣೆಗಳೊಂದಿಗೆ ಸೇವೆ ಹಾಗೂ ಉತ್ತಮ ಸಂಸ್ಕಾರಗಳನ್ನು ಜೀವನದ ಅಳವಡಿಸಿಕೊಳ್ಳಬೇಕು. ಆ ಮೂಲಕ ವೈಯಕ್ತಿಕ ಮತ್ತು ಸಾಮಾಜಿಕ ಇನ್ನಷ್ಟು ಬದುಕು ಸುಂದರವಾಗಿಸಿಕೊಳ್ಳಬೇಕು ಎಂದರು.

ಹಿರೇಮಾಗಡಿ ವಿರಕ್ತಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿರದೇ ಸಮಾಜಕ್ಕೆ ಹಲವು ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿವೆ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಠಗಳು ಮಹತ್ವದ ಪಾತ್ರ ವಹಿಸುತ್ತಿದ್ದು, ಜನರಲ್ಲಿ ಸದಾಚಾರ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯ ಮಾಡುತ್ತಿವೆ ಎಂದು ಹೇಳಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆ ಕವಿತಾ ಮಿಶ್ರಾ ಮಾತನಾಡಿ, ರೈತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾನೆ. ರೈತ ಬೆಳೆದ ಬೆಳೆಗೆ "ಸೂಕ್ತ ಬೆಲೆ ದೊರೆಯದೇ ಇರುವುದರಿಂದ ಕೃಷಿ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ರೈತರು ಮತ್ತು ಯುವಕರು ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಶಾಸಕ ಯು.ಬಿ. ಬಣಕಾರ ಹಾಗೂ ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿದರು. ಈ ಸಂಧರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆ ಕವಿತಾ ಮಿಶ್ರಾ ಹಾಗೂ ಅಪರ ಜಿಲ್ಲಾಧಿಕಾರಿ ನಾಗರಾಜ ಎಲ್. ಅವರನ್ನು ಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಚಿಕ್ಕೇರೂರ ವಿರಕ್ತಮಠದ ಚಂದ್ರಶೇಖರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಗುರುಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಗಂಗಾಧರಯ್ಯ ಹಿರೇಮಠ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಉಪಾಧ್ಯಕ್ಷ ಬಸವರಾಜ ಹೆಡಿಗೊಂಡ, ಎಸ್.ಎಫ್. ಎನ್ ಗಾಜಿಗೌಡ್ರ, ಮಲ್ಲಿಕಾರ್ಜುನ ಬಳ್ಳಾರಿ, ಶಿರಸಿಯ ಕೃಷಿ ಇಲಾಖೆ ಅಧಿಕಾರಿ ರೂಪಾ ಪಾಟೀಲ ಸೇರಿದಂತೆ ಭಕ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದ ಮಾರ್ಗಸೂಚಿಯಂತೆ ಬರ ಘೋಷಣೆ: ಸಿಎಂ
ಕ್ಷೇತ್ರದಲ್ಲಿ 21 ಕೆಪಿಎಸ್ ಶಾಲೆಗಳ ಮಂಜೂರು-ಶಾಸಕ ಪಠಾಣ