ರಾಜಕೀಯ ಗಿಮಿಕ್‌ ಮಾಡುವವರನ್ನು ದೂರವಿಡಿ

KannadaprabhaNewsNetwork |  
Published : Aug 13, 2025, 12:30 AM IST
೧೨ಕೆಎಲ್‌ಆರ್-೭ಕೋಲಾರ ತಾಲೂಕು ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ.

ಕನ್ನಡಪ್ರಭ ವಾರ್ತೆ ಕೋಲಾರಹತ್ತು ವರ್ಷಗಳ ಕಾಲ ಕ್ಷೇತ್ರದ ಜನತೆಯ ಆಶೀರ್ವಾದದಿಂದ ವರ್ತೂರು ಪ್ರಕಾಶ್ ಕ್ಷೇತ್ರದ ಶಾಸಕ ಸಚಿವರಾಗಿದ್ದರು. ಸಿ.ಎಸ್.ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು ಆವತ್ತು ಸುಮ್ಮನೆ ಇದ್ದು ಈಗ ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ. ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಸಭೆಗಳಲ್ಲಿ ಮಾತನಾಡಿ, ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ. ಇವರು ನಮ್ಮ ಜಿಲ್ಲೆಯವರು ಅಲ್ಲ ಆದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲೀಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಎಂದು ಟೀಕಿಸಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ, ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಗಳು ಅಭಿವೃದ್ಧಿ ಮಾಡಲಾಗುತ್ತದೆ, ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ನಮಗೆ ಅಭಿವೃದ್ಧಿ ಮುಖ್ಯವಾಗಿದೆ, ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡುವಂತೆ ಮನವಿ ಮಾಡಿದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.ಮೈತ್ರಿ ಅಭ್ಯರ್ಥಿ ದೂರವಿಡಿ

ಇವತ್ತು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬೇಡಿ. ಅಧಿಕಾರವಿದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು, ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೇ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ, ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ ಗ್ಯಾರಂಟಿ ಯೋಜನೆ ಬಡವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು.ಜಿ.ಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ.ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಉರಟಿ ಆಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ