ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಕಾರ್ಯಕ್ರಮಕ್ಕೆ ಆತಿಥಿಯಾಗಿ ಆಗಮಿಸಿದ್ದ ಮೈಸೂರಿನ ಮಹಾರಾಣಿ ಕಾಲೇಜಿನ ಸಹಪ್ರಾಧ್ಯಾಪಕ ಸಿ. ಎನ್. ಹೇಮಚಂದ್ರ ಮಾತನಾಡಿ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಸದಾ ಇರಬೇಕು. ಸಮಾಜದಲ್ಲಿ ಉದ್ಯೋಗಕ್ಕೆ ತೀವ್ರ ಪೈಪೋಟಿ ಇದ್ದು ಕೌಶಲ್ಯಯುತ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ದೊರೆಯುತ್ತದೆ. ಸಮಯದ ಮಹತ್ವವನ್ನು ಅರಿಯುವುದು ಅತಿ ಮುಖ್ಯ ಮೊಬೈಲ್ ಬಳಕೆಯನ್ನು ನಿಮ್ಮ ಜ್ಞಾನ ಹೆಚ್ಚಿ ಸಲು ಬಳಸಿಕೊಳ್ಳಿ, ಆತ್ಮಶಕ್ತಿ ಹೆಚ್ಚಿಸಿಕೊಂಡು, ಮೌಲ್ಯಗಳನ್ನು ಸಂಪಾದಿಸಿ ಎಂದು ಸಲಹೆ ನೀಡಿದರು.
ಹಾಸನ ಹಾಗೂ ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಮಹಾಸ್ವಾಮೀಜಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಿಗೆ ಸದಾ ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಬೇಕಿದೆ. ಪತ್ರಿಕೆಗಳು ಹಾಗೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಅಲ್ಲದೆ, ಪೂಜ್ಯಶ್ರೀಗಳು ಮತ್ತು ಗಣ್ಯರು ಕಾಲೇಜಿನ ವಾರ್ಷಿಕ ಸಂಚಿಕೆ ಗಿರಿ ವೈಭವವನ್ನು ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಕೆ. ಮಂಜುನಾಥ್, ಸಹಾಯಕ ಪ್ರಾಧ್ಯಾಪಕರಾದ ಎನ್.ಟಿ. ನಾಗರಾಜು, ಎಂ. ಆರ್. ನಿರುಷ, ನಂದೀಶ್, ಹಾಗೂ ಬಿ.ಜಿ.ಎಸ್.ಪಿ.ಯು. ಕಾಲೇಜಿನ ಪ್ರಾಂಶುಪಾಲ ಸಿ. ಸಿ. ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.