ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣಕ್ಕೆ ಕ್ರಮ

KannadaprabhaNewsNetwork |  
Published : Jun 12, 2025, 02:12 AM IST
ತಾಲೂಕು ಕಚೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಶಾಸಕ ಬಾಲಕೃಷ್ಣ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು. | Kannada Prabha

ಸಾರಾಂಶ

ಸರ್ಕಾರಿ ಕಚೇರಿಗಳಲ್ಲಿ ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕೆಂಬ ಉದ್ದೇಶದಿಂದ ಎಲ್ಲ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ಟಪಾಲು ವ್ಯವಸ್ಥೆಯಿಂದ ಆಗುತ್ತಿದ್ದ ಲೋಪದೋಷಗಳು ನಿವಾರಣೆಯಾಗುತ್ತವೆ. ಜನರು ಸಹ ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ. ಅನಗತ್ಯ ಹೊರೆಯನ್ನು ಇಳಿಸಿದಂತಾಗಿದೆ. ದಾಖಲೆಗಳ ಸೃಷ್ಟಿಗೆ ತಡೆಯೊಡ್ಡಿದಂತಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಸರ್ಕಾರಿ ಕಚೇರಿಗಳಲ್ಲಿ ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸಗಳು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಯಬೇಕೆಂಬ ಉದ್ದೇಶದಿಂದ ಎಲ್ಲ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಿ ಮಾತನಾಡಿ, ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣ ಮಾಡುವ ನಿಟ್ಟಿನಲ್ಲಿ ಲ್ಯಾಪ್‌ಟಾಪ್ ನೆರವಾಗಲಿದೆ ಎಂದರು. ಕಂದಾಯ ಇಲಾಖೆಯಲ್ಲಿ ಆಸ್ತಿ ಮತ್ತು ಭೂ ದಾಖಲೆಗಳ ನಿರ್ವಹಣೆಗೆ ಸಂಬಂಧಿ ಸಿದಂತೆ ಸಾರ್ವಜನಿಕರ ಕೆಲಸಗಳು ದಕ್ಷ ಮತ್ತು ಪ್ರಾಮಾಣಿಕವಾಗಿ ಆಗಲು ಇದು ನೆರವಾಗಲಿದೆ. ಹೀಗಾಗಿ ಯಾವುದೇ ಸಬೂಬು ಹೇಳದೆ ಕೆಲಸ ಮಾಡಬೇಕು. ದಾಖಲೆಗಳು ಕಳೆದು ಹೋಗದಂತೆ ಡಿಜಿಟಲೀಕರಣ ಮಾಡಿದ್ದು, ಎಲ್ಲ ಕಡತಗಳ ವಿಲೇವಾರಿ ಆನ್‌ಲೈನ್ ಮೂಲಕವೇ ಆಗಬೇಕು ಎಂದು ಸೂಚಿಸಿದರು. ಇಂತಹ ಬದಲಾವಣೆಗಳಿಂದ ಕೆಲಸಗಳು ಶೀಘ್ರ ಆಗುವ ಜತೆಗೆ ಸಿಬ್ಬಂದಿಗೂ ಕೆಲಸ ಸುಲಭವಾಗುತ್ತದೆ. ಟಪಾಲು ವ್ಯವಸ್ಥೆಯಿಂದ ಆಗುತ್ತಿದ್ದ ಲೋಪದೋಷಗಳು ನಿವಾರಣೆಯಾಗುತ್ತವೆ. ಜನರು ಸಹ ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ. ಅನಗತ್ಯ ಹೊರೆಯನ್ನು ಇಳಿಸಿದಂತಾಗಿದೆ. ದಾಖಲೆಗಳ ಸೃಷ್ಟಿಗೆ ತಡೆಯೊಡ್ಡಿದಂತಾಗಿದೆ ಎಂದರು.

ತಾಲೂಕಿನಲ್ಲಿ ಇದುವರೆಗೂ ೬೦ ಲಕ್ಷ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಇನ್ನೂ ೧೫ ಸಾವಿರ ದಾಖಲೆಗಳು ಡಿಜಿಟಲೀಕರಣವಾಗಬೇಕಿದೆ. ಮೂರು ತಿಂಗಳಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ. ರೆಕಾರ್ಡ್ ರೂಂನಲ್ಲಿದ್ದ ಹಳೆಯ ಪೇಪರ್ ದಾಖಲೆಗಳೆಲ್ಲವೂ ಕಂಪ್ಯೂಟರ್‌ನಲ್ಲಿ ದಾಖಲಾಗಲಿವೆ. ಆ ಮೂಲಕ ಅವುಗಳನ್ನು ಸುರಕ್ಷಿತವಾಗಿಡಬಹುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ