ನೆನೆಗುದಿಗೆ ಬಿದ್ದಿದ್ದ ಒಳಚರಂಡಿ ಕಾಮಗಾರಿ ಚುರುಕಿಗೆ ಕ್ರಮ: ಶಾಸಕ ಎ.ಮಂಜು

KannadaprabhaNewsNetwork |  
Published : Jul 23, 2025, 01:45 AM IST
22ಎಚ್ಎಸ್ಎನ್10 :  | Kannada Prabha

ಸಾರಾಂಶ

ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಮಂಜು, ಸರ್ಕಾರ ಶಾಸಕರ ನಿಧಿಯಲ್ಲಿ ಶೇ. 75ರಷ್ಟು ಅನುದಾನವನ್ನು ಇಲಾಖೆ ಕಾಮಗಾರಿಗೆ ಬಳಸುವಂತೆ ಸೂಚಿಸಿದೆ. ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ, ಅದರಲ್ಲಿ ಅತ್ಯಂತ ತುರ್ತಾಗಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಪಟ್ಟಣದಲ್ಲಿ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಶಾಸಕ ಎ.ಮಂಜು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಂಜಿನಿಯರ್ ಗಳಿಗೆ ಸೂಚಿಸಿದರು.

ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದ ಅವರು, 13 ವರ್ಷಗಳ ಹಿಂದೆ ಪ್ರಾರಂಭಿಸಲಾಗಿದ್ದ ಯೋಜನೆಯು ನೆನೆಗುದಿಗೆ ಬಿದ್ದಿದೆ. ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಅಗತ್ಯವಾದ ಭೂಮಿಯನ್ನು ಸಹ ಖರೀದಿ ಮಾಡಲಾಗಿದೆ. ವಿಳಂಭ ನೀತಿ ಅನುಸರಿಸದೆ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಪಟ್ಟಣ ವ್ಯಾಪ್ತಿಯಲ್ಲಿ 80 ಕಿಮೀ ಒಳಚರಂಡಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು, ಈಗ ಪಟ್ಟಣ ಸಾಕಷ್ಟು ಬೆಳೆದಿದೆ. ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿರಿಸಿಕೊಂಡು ಯೋಜನೆಯನ್ನು ವಿಸ್ತರಿಸಿ ಹೆಚ್ಚಿನ ಅನುದಾನ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಗುವುದು. ಕಾಮಗಾರಿ ನಡೆಸಲು ಅಗತ್ಯ ಸಹಕಾರ ನೀಡುವಂತೆ ತಹಸೀಲ್ದಾರ್, ಸರ್ವೇ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತುರ್ತು ಕಾಮಗಾರಿ ಪಟ್ಟಿ ಸಿದ್ಧಪಡಿಸುವಂತೆ ಸೂಚನೆ:

ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಮಂಜು, ಸರ್ಕಾರ ಶಾಸಕರ ನಿಧಿಯಲ್ಲಿ ಶೇ. 75ರಷ್ಟು ಅನುದಾನವನ್ನು ಇಲಾಖೆ ಕಾಮಗಾರಿಗೆ ಬಳಸುವಂತೆ ಸೂಚಿಸಿದೆ. ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ, ಅದರಲ್ಲಿ ಅತ್ಯಂತ ತುರ್ತಾಗಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಅರಣ್ಯ ಇಲಾಖೆ ಮನಸ್ಸಿಗೆ ಬಂದಂತೆ ರಸ್ತೆ ಬದಿ ಗಿಡಗಳನ್ನು ನೆಡುತ್ತಿದೆ. ನಿರ್ದಿಷ್ಟ ಅಂತರ ಬಿಟ್ಟು ಗಿಡಗಳನ್ನು ನೆಡುವಂತೆ ಕ್ರಮ ಕೈಗೊಳ್ಳಬೇಕು, ಗ್ರಾಮೀಣ ಭಾಗದಲ್ಲಿ ಕೊಳವೆ ಅಳವಡಿಸಲು ರಸ್ತೆಗಳನ್ನು ಅಗೆಯುತ್ತಿದ್ದು ರಸ್ತೆಗಳು ಹಾಳಾಗುತ್ತಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯ, ಭೂಮಾಪನ ಇಲಾಖೆ ಸಹಾಯಕ ನಿರ್ದೇಶಕ ಸುಂದರ್, ಒಳಚರಂಡಿ ಮಂಡಳಿ ಎಂಜಿನಿಯರ್ ಗಳಾದ ಉಮೇಶ್, ಸುಹಾಸ್, ಪಪಂ ಮುಖ್ಯಾಧಿಕಾರಿ ನಾಗೇಂದ್ರ, ಎಇಇ ಬಿಂದು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ