ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬೆಂಗಳೂರು ಸಮತ್ವ ಟ್ರಸ್ಟ್ ಹಾಗೂ ಅಶೋಕ ಪರಿಸರ ಸಂಶೋಧನೆ ಮತ್ತು ಪರಿಸರ ವಿಜ್ಞಾನದತ್ತಿ ಜಿಲ್ಲಾ ಹಾಗೂ ತಾಲೂಕು ಸೋಲಿಗ ಸಂಘ, ರಾಜ್ಯಸೋಲಿಗ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಶನಿವಾರ ನಡೆದ ಆದಿವಾಸಿ ಕಾಲೇಜು ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರೇರಣಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಗಿರಿಜನರಿಗೆ ಸರ್ಕಾರ ವಿವಿಧ ಇಲಾಖೆಗಳ ಮೂಲಕ ವಿವಿಧ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಅವರಿಗೆ ತಲುಪಿಸುವಲ್ಲಿ ಗೊಂದಲವೇರ್ಪಟ್ಟಿದೆ. ಇದರಿಂದ ಗಿರಿಜನರಿಗೆ ಸಮರ್ಪಕವಾಗಿ ಸೌಲಭ್ಯ ಸಿಗುತ್ತಿಲ್ಲ. ಎಲ್ಲ ಇಲಾಖೆಗಳ ಸೌಲಭ್ಯ ಒಂದೆಡೆ ಸಿಗಬೇಕು ಎಂಬ ನಿಟ್ಟಿನಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಜಿಲ್ಲಾಡಳಿತ ಕ್ರಮವಹಿಸಲಿದೆ ಎಂದರು.ಜಿಲ್ಲೆಯಲ್ಲಿನ ಅರಣ್ಯ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಗಿರಿಜನರ ಆರೋಗ್ಯ ಸುಧಾರಣೆಗೆ ಹಿಂದಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ರಾಜ್ಯದಲ್ಲೇ ಪ್ರಥಮ ಬಾರಿಗೆ ’ಗಿರಿಜನ ಆರೋಗ್ಯ ನಾವಿಕರು’ಎಂಬ ಯೋಜನೆ ರೂಪಿಸಿದ್ದರು. ಈಗಲೂ ಅದು ಮುಂದುವರೆಯುತ್ತಿದ್ದು, ಗಿರಿಜನರು ಇದರ ಸದ್ಬಳಕೆಗೆ ಮುಂದಾಗಬೇಕು. ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಸೋಲಿಗರ ಸಾಧನೆ ಮಾಡಿರುವವರು ನಿಮಗೆ ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದಲೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ, ಇದು ನಿಮಗೆ ಸ್ಪೂರ್ತಿ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕ ರಾಷ್ಟ್ರ ಪಶಸ್ತಿ ಪುರಸ್ಕೃತ ಮಧುಸೂಧನ್ ಅವರನ್ನು ಸನ್ಮಾನಿಸಲಾಯಿತು. ಜಿ.ಪಂ. ಸಿಇಒ ಮೋನಾ ರೋತ್, ಉಪವಿಭಾಗಾಧಿಕಾರಿ ದಿನೇಶ್ಕುಮಾರ್ ಮೀನಾ, ಸಮತ ಟ್ರಸ್ಟ್ ಅಧ್ಯಕ್ಷ ಎಸ್.ಶ್ರೀನಿವಾಸ್, ಸುಭಾಷ್, ಏಟ್ರಿ ಸಂಸ್ಥೆ ಸಂಶೋಧಕ ಡಾ.ಸಿ.ಮಾದೇಗೌಡ, ಜಿಲ್ಲಾಬುಡಕಟ್ಟು ಗಿರಿಜನಅಭಿವೃದ್ದಿ ಸಂಘದ ಅಧ್ಯಕ್ಷ ಯು.ರಂಗೇಗೌಡ, ಚಾಮರಾಜನಗರ ತಾಲೂಕು ಸೋಲಿಗ ಅಭಿವೃದ್ದಿ ಸಂಘದ ಅಧ್ಯಕ್ಷ ಕೋಣೂರೇಗೌಡ, ಹನೂರುಘಟಕದ ದೊಡ್ಡಸಿದ್ದಯ್ಯ, ಗುಂಡ್ಲುಪೇಟೆ ಲ್ಯಾಂಪ್ ಸೊಸೈಟಿ ಅಧ್ಯಕ್ಷೆ ನಾಗಮ್ಮ, ಪುಟ್ಟಮ್ಮ, ಮಹದೇವಮ್ಮ ಭಾಗವಹಿಸಿದ್ದರು.