ಕಳವಾಗಿದ್ದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ

KannadaprabhaNewsNetwork |  
Published : Dec 05, 2025, 02:00 AM IST
ಪೋಟೋ: 04ಎಸ್‌ಎಂಜಿಕೆಪಿ04 | Kannada Prabha

ಸಾರಾಂಶ

ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್‌ಗಳನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಹಿಂದಿರುಗಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್‌ಗಳನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಹಿಂದಿರುಗಿಸಿದರು.

ಜಯನಗರ ಠಾಣೆ ಆವರಣದಲ್ಲಿ ವಾರಸುದಾರರಿಗೆ ಮೊಬೈಲ್‌ಗಳನ್ನು ವಿತರಿಸಿ ಮಾತನಾಡಿದ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲೆಯಾದ್ಯಂತ ಇದುವರೆಗೂ ಸುಮಾರು 6445 ಕಳೆದು ಹೋದ ಮೊಬೈಲ್‌ಗಳು ವರದಿಯಾಗಿದ್ದು, ಇವುಗಳಲ್ಲಿ ದೇಶದ ವಿವಿಧ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ ಮತ್ತು ತೆಲಂಗಾಣ ಹಾಗೂ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪತ್ತೆ ಮಾಡಿ ಸುಮಾರು 1194ಕ್ಕೂ ಹೆಚ್ಚು ಮೊಬೈಲ್‌ಗಳನ್ನು ವಾರಸುದಾರರಿಗೆ ನೀಡಿದ್ದು, ನಂತರ ಇದೇ ರೀತಿ ಕಳೆದ 02 ತಿಂಗಳಲ್ಲಿ 110 ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡಲಾಗಿದೆ ಎಂದರು.

ಮೊಬೈಲ್ ಫೋನ್ ಎಂಬುದು ಈ ದಿನಗಳಲ್ಲಿ ಮನುಷ್ಯನ ಒಂದು ಭಾಗವೇ ಆಗಿದೆ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದ ಎಲ್ಲರೂ ಸಹ ಮೊಬೈಲ್ ಫೋನ್ ಅನ್ನು ಉಪಯೋಗಿಸುವುದು ಸರ್ವೇ ಸಾಮಾನ್ಯವಾಗಿದೆ. ಯಾರೇ ಆಗಲಿ ಬೆಳಗ್ಗೆ ಎದ್ದ ಕೂಡಲೇ ದೇವರ ಮುಖವನ್ನು ನೋಡುವ ಬದಲು ಸಾಮಾಜಿಕ ಜಾಲತಾಣವನ್ನು ವೀಕ್ಷಿಸುತ್ತಾರೆ ಎಂದರು.

ನಿಮ್ಮ ಮೊಬೈಲ್ ಫೋನ್ ಕಳೆದು ಹೋದಾಗ ನೀವು ಜಾಗರೂಕರಾಗಿರದೇ ಹೋದಲ್ಲಿ, ಈ ರೀತಿ ಕಳೆದು ಹೋಗಿರುವ ಮೊಬೈಲ್‌ನ ಸಿಮ್ ಕಾರ್ಡ್‌ನ್ನು ಉಪಯೋಗಿಸಿಕೊಂಡು ಬೇರೆ ಬೇರೆ ರೀತಿಯ ಸೈಬರ್ ಅಪರಾಧವನ್ನು ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದುದರಿಂದ ತಾವೆಲ್ಲರೂ ಕೂಡ ಜಾಗೂರಕರಾಗಿರಬೇಕು ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ.ಕಾರಿಯಪ್ಪ ಹಾಗೂ ರಮೇಶ್ ಕುಮಾರ್, ಸೈಬರ್ ಕ್ರೈಂ ಡಿವೈಎಸ್‌ಪಿ ಕೃಷ್ಣ ಮೂರ್ತಿ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆ ಇನ್ಸ್‌ಫೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

------

ಜಯನಗರ ಠಾಣೆ ಆವರಣದಲ್ಲಿ ಮೊಬೈಲ್‌ ಕಳೆದುಕೊಂಡ ವಾರಸುದಾರರಿಗೆ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ ಹಿಂದುರಿಗಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಡಘಟ್ಟ ಗ್ರಾ.ಪಂ.ಗೆ ಗಾಂಧೀಗ್ರಾಮ ಪುರಸ್ಕಾರ: ರುದ್ರಮ್ಮ ಬಸವರಾಜು
ಎಚ್‌. ಹಾಲಪ್ಪರನ್ನು ಜನತೆ ಶಾಶ್ವತವಾಗಿ ಮನೆ ಸೇರಿಸುತ್ತಾರೆ: ಅಣ್ಣಪ್ಪ ಹಾಲಘಟ್ಟ