ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರ್ಯಾಪಿಡೋ ಅಥವಾ ಅಂತಹ ಯಾವುದೇ ಸಂಸ್ಥೆಯು ಸಾರಿಗೆ ಸೇವೆ ಆರಂಭಿಸಿದಲ್ಲಿ ಸರ್ಕಾರದ ಮಾರ್ಗಸೂಚಿಯನುಸಾರ ಅನುಮತಿ ನೀಡಲಾಗುವುದು. ಮಾನ್ಯತೆ ಪಡೆಯದೇ, ದಾಖಲೆಗಳಿಲ್ಲದೆ ಅನಧಿಕೃತವಾಗಿ ವಾಹನ ಚಲಾಯಿಸುತ್ತಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಸ್ ಟಿಕೆಟ್ ದರ ಸೇರಿದಂತೆ ಹೋಟೆಲ್ ಆಹಾರ ಇನ್ನಿತರ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಗೆಯೇ ಆಟೋರಿಕ್ಷಾ ಪ್ರಯಾಣದ ಕನಿಷ್ಠ ದರವನ್ನು 40 ರು.ನಿಂದ 50 ರು.ಗೆ ಏರಿಸಬೇಕು. ಶಿವಮೊಗ್ಗ ನಗರ 4-5ಕಿ.ಮೀ. ವ್ಯಾಪ್ತಿಗೆ ಮಾತ್ರ ಸೀಮಿತವಾಗಿದ್ದು, ಪ್ರತಿನಿತ್ಯ ಸುಮಾರು 8000 ದಿಂದ 9000 ಆಟೋಗಳು ಸಂಚರಿಸುತ್ತಿವೆ. ನಗರದಲ್ಲಿ 10ಕಿ.ಮೀ.ಗೆ ಸೀಮಿತಗೊಳಿಸಲಾಗಿರುವ ಆಟೋ ಸಂಚಾರಿ ಪರವಾನಿಗೆಯನ್ನು 20 ಕಿ.ಮೀ ವಿಸ್ತರಿಸಬೇಕು. ನಗರದ ಸರ್ಕಾರಿ ಮತ್ತು ಖಾಸಗಿ ಬಸ್ನಿಲ್ದಾಣಗಳ ಎದುರು ಪ್ರಯಾಣಿಕರನ್ನು ಇಳಿಸುವ ಸಂದರ್ಭದಲ್ಲಿ ನೋ ಪಾರ್ಕಿಂಗ್ ಏರಿಯಾ ಎಂದು ಪೊಲೀಸ್ ಅಧಿಕಾರಿ ಸಿಬ್ಬಂದಿ ದಂಡ ವಿಧಿಸುತ್ತಿದ್ದಾರೆ. ಇಂತಹ ಸ್ಥಳಗಳಲ್ಲಿ ಪ್ರಯಾಣಿಕರು ಇಳಿದು ಹೋಗುವ ಅವಧಿಗೆ ವಿನಾಯಿತಿ ನೀಡುವಂತೆ ಆಟೋ ಚಾಲಕರು ಮನವಿ ಮಾಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳಕರ್, ರಾಜ್ಯ ರಸ್ತೆ ಸಾರಿಗೆ ನಿಗಮದ ನಿಯಂತ್ರಣಾಧಿಕಾರಿ ದಿನೇಶ್ ಸೇರಿದಂತೆ ಆಟೋ ಚಾಲಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
-----------
ನಗರ ಸಾರಿಗೆ ಬಸ್ಸುಗಳ ಚಾಲಕರು ತಮ್ಮ ಬಸ್ಸುಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ, ಜನರನ್ನು ತುಂಬಿಕೊಂಡು ಹೋಗುತ್ತಿರುವುದರಿಂದ ಜನರು ಆಟೋ ಬಳಕೆಯನ್ನು ಕಡಿಮೆ ಮಾಡಿದ್ದಾರೆ. ಸಿಟಿ ಬಸ್ಗಳ ಚಾಲಕರು ತಮಗೆ ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಬೇಕು. ರೋಗಿಗಳು, ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ಸಾಗಿಸುವ ಭರದಲ್ಲಿ ಕೆಲವು ಕಡೆಗಳಲ್ಲಿ ಸಿಗ್ನಲ್ ಜಂಪ್ ಆಗಿರುವ ಪ್ರಕರಣಗಳಲ್ಲಿ ಮಾನವೀಯ ನೆಲೆಯಲ್ಲಿ ವಿನಾಯಿತಿ ನೀಡಬೇಕು.
--------------------
ನಗರದ ರೈಲ್ವೆ ಸ್ಟೇಷನ್ನಲ್ಲಿ ರೈಲು ಬರುವುದು ಕೆಲವೊಮ್ಮೆ ವಿಳಂಬವಾದಾಗ ರೈಲ್ವೆ ನಿಲ್ದಾಣದಲ್ಲಿ ಆಟೋಗಳ ಚಾಲಕರು ಗ್ರಾಹಕರಿಗಾಗಿ ಕಾದಿರುತ್ತಾರೆ. ಅಂತಹ ಸಂದರ್ಭದಲ್ಲಿ ಪೊಲೀಸರು ಆಟೋಗಳನ್ನು ನಿಲ್ಲಿಸದಂತೆ ನಿಷೇಧಿಸುತ್ತಿದ್ದಾರೆ. ಇದರಿಂದ ಆಟೋ ಚಾಲಕರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ರೈಲು ವಿಳಂಬ ಬರುವ ಅಥವಾ ಹೊರಡುವ ಸಂದರ್ಭದಲ್ಲಿ ವಾಹನಗಳ ನಿಲುಗಡೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು.
----------
ಆಟೋ ಚಾಲಕರು ಶಾಲಾ ಮಕ್ಕಳ ಪ್ರಯಾಣದ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸಬೇಕು. ಆಟೋದಲ್ಲಿ ಚಾಲಕ-ಮಾಲಕರ, ಪೊಲೀಸ್ ಇಲಾಖೆಯ ನೋಂದಣಿ ಹೊಂದಿರುವ ಮಾಹಿತಿ ಫಲಕವನ್ನು ತಮ್ಮ ಆಟೋದಲ್ಲಿ ಅಳವಡಿಸಬೇಕು. ಆಟೋಗಳ ವಿಮೆಯನ್ನು ಕಾಲಕಾಲಕ್ಕೆ ನವೀಕರಿಸಿಕೊಂಡಿರಬೇಕು.
- ಬಿ.ನಿಖಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶಿವಮೊಗ್ಗ.ಪೊಟೋ: 15ಎಸ್ಎಂಜಿಕೆಪಿ09
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ನಗರದ ಆಟೋರಿಕ್ಷಾ ಸಂಚಾರಿ ವ್ಯವಸ್ಥೆಯಲ್ಲಿ ನ್ಯೂನತೆಗಳು ಮತ್ತು ಪರಿಹಾರ ಕ್ರಮಗಳ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿದರು.