- ಭದ್ರಾ ಡ್ಯಾಂ ಬಳಿ ಅವೈಜ್ಞಾನಿಕ ಕಾಮಗಾರಿ ನಡೆದರೆ ತೋಟಗಳೇ ಉಳಿಯೋದಿಲ್ಲ: ಎಸ್.ಎ.ರವೀಂದ್ರನಾಥ ಕಿಡಿನುಡಿ
- 172 ಗ್ರಾಮಗಳಿಗೆ ಭದ್ರಾ ಡ್ಯಾಂನಿಂದ ನೀರೊದಗಿಸುವ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕ
- ಕಾಮಗಾರಿಯಿಂದ ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಲಕ್ಷಾಂತರ ರೈತರ ಬದುಕಿಗೆ ಸಂಕಷ್ಟ- - -
ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿರುವ ಏರಿಯನ್ನು ಕಾಂಕ್ರೀಟ್ ಹಾಕಿ, ಹೊಸದಾಗಿ ಏರಿ ನಿರ್ಮಿಸುವ ಮೂಲಕ ತ್ವರಿತವಾಗಿ ಕಾಮಗಾರಿ ಕೈಗೊಂಡು, ಮಳೆಗಾಲದ ಹಂಗಾಮಿನ ನೀರು ಹರಿಸಿ ಎಂದು ಭಾರತೀಯ ರೈತ ಒಕ್ಕೂಟದ ಹಿರಿಯ ಧುರೀಣ, ಬಿಜೆಪಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸರ್ಕಾರಕ್ಕೆ ತಾಕೀತು ಮಾಡಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ 346 ಗ್ರಾಮ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ ತಾಲೂಕುಗಳ 172 ಗ್ರಾಮಗಳಿಗೆ ಭದ್ರಾ ಡ್ಯಾಂನಿಂದ ನೀರೊದಗಿಸುವ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಕಾಮಗಾರಿ ಸ್ಥಳ ಭದ್ರಾ ಡ್ಯಾಂನ ಬಫರ್ ಝೋನ್ ಆಗಿದೆ. ಅಲ್ಲಿ ಯಾವುದೇ ಕಾಮಗಾರಿ ಕೈಗೊಂಡರೆ ಡ್ಯಾಂನ ಅಭದ್ರತೆಗೆ ಕಾರಣವಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ರೈತರ ಒಕ್ಕೂಟದ ಮುಖಂಡ, ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ಮಾತನಾಡಿ, ಭದ್ರಾ ಬಲದಂಡೆ ನಾಲೆ ಮೂಲಕ ಜಿಲ್ಲೆಗೆ ನೀರು ಪೂರೈಕೆಯಾಗುತ್ತದೆ. ಬಲದಂಡೆ ನಾಲೆ ಕಲ್ಲುಗುಡ್ಡದ ಮಧ್ಯೆ ಹಾದುಬಂದಿದೆ. ಈಗ ಬಲದಂಡೆ ಸೀಳಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮೂರು ತಾಲೂಕಿಗೆ ನೀರು ಪೂರೈಸಲು ಪೈಪ್ ಲೈನ್ ಅಳವಡಿಸುವ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದಾರೆ. ಮೂರೂ ತಾಲೂಕುಗಳಿಗೆ ಕುಡಿಯುವ ನೀರು ಪೂರೈಸಲು ನಮ್ಮ ಅಭ್ಯಂತರವಿಲ್ಲ. ಭದ್ರಾ ಡ್ಯಾಂ ಹಿನ್ನೀರಿನಿಂದ ಜಾಕ್ ವೆಲ್ ನಿರ್ಮಿಸಿ, ನೀರು ಒಯ್ಯಲು ಸರ್ಕಾರ ಮುಂದಾಗಲಿ. ಯಾವುದೇ ಕಾರಣಕ್ಕೂ ನಮ್ಮ ಹೋರಾಟವಂತೂ ಇಲ್ಲಿಗೆ ನಿಲ್ಲುವುದಿಲ್ಲ ಎಂದರು.
- - -
- ರಾಜಶೇಖರ ನಾಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ
-26ಕೆಡಿವಿಜಿ4:
ದಾವಣಗೆರೆಯಲ್ಲಿ ಗುರುವಾರ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ ಇತರರು ಇದ್ದರು.