ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಬೇಕು

KannadaprabhaNewsNetwork |  
Published : Jul 19, 2024, 12:45 AM IST
18ಎಚ್ಎಸ್ಎನ್4 : ಬಸವಾಪಟ್ಟಣದ ಕೆಪಿಎಸ್‌ ಶಾಲಾ ಆವರಣದಲ್ಲಿ ಅರಕಲಗೂಡು ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ವತಿಯಿಂದ ಹಣ್ಣಿನ ಗಿಡಗಳನ್ನು ನೆಡಲಾಯಿತು. | Kannada Prabha

ಸಾರಾಂಶ

ಪರಿಸರ ಎಲ್ಲೆಡೆ ಕಲುಷಿತವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಬೇಕು. ಪ್ರತಿದಿನ ಲಕ್ಷಾಂತರ ಕೆ.ಜಿಯಷ್ಟು ಪ್ಲಾಸ್ಟಿಕ್ ಬಾಟೆಲ್, ಬ್ಯಾಗ್‌ಗಳು ನದಿಮೂಲ, ಜಲಮೂಲ ಅಲ್ಲದೆ ಭೂಮಿಯಲ್ಲಿ ಸೇರಿ ಒಟ್ಟಾರೆ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಪ್ಲಾಸ್ಟಿಕ್‌ಗೆ ಬದಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಮರಗಿಡಗಳನ್ನು ಪೋಷಿಸಬೇಕು. ಹೀಗೆ ಪರಿಸರ ಉತ್ತಮಗೊಳಿಸಿ ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡುವುದು ಸ್ವಸ್ಥ ಸಮಾಜ ಸಮಿತಿಯ ಮೂಲ ಉದ್ದೇಶವಾಗಿದೆ ಎಂದು ಪ್ರದೀಪ್ ಎ.ಟಿ ರಾಮಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಸವಾಪಟ್ಟಣ

ವಿದ್ಯಾರ್ಥಿಗಳು ಪ್ರತಿ ವಿಷಯವನ್ನು ಅರಿಯಬೇಕು. ಸಾರ್ವಜನಿಕರಿಗೆ ಆಗುವ ಅನ್ಯಾಯಗಳ ಬಗ್ಗೆ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು. ಪರಿಸರದ ಉಳಿವಿಗಾಗಿ ಶ್ರಮಿಸಿ ಮುಂದಿನ ಪೀಳಿಗೆಗೆ ಸ್ವಾಸ್ಥ್ಯ ಸಮಾಜವನ್ನು ನೀಡಬೇಕು ಎಂದು ಪ್ರದೀಪ್ ಎ.ಟಿ ರಾಮಸ್ವಾಮಿ ತಿಳಿಸಿದರು.

ಅರಕಲಗೂಡು ಸ್ವಸ್ಥ ಸಮಾಜ ನಿರ್ಮಾಣ ಸಮಿತಿ ವತಿಯಿಂದ ಬಸವಾಪಟ್ಟಣದ ಕೆ.ಪಿ.ಎಸ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಟ್ಟು ಮಾತನಾಡುತ್ತ, ಪರಿಸರ ಎಲ್ಲೆಡೆ ಕಲುಷಿತವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಬೇಕು. ಪ್ರತಿದಿನ ಲಕ್ಷಾಂತರ ಕೆ.ಜಿಯಷ್ಟು ಪ್ಲಾಸ್ಟಿಕ್ ಬಾಟೆಲ್, ಬ್ಯಾಗ್‌ಗಳು ನದಿಮೂಲ, ಜಲಮೂಲ ಅಲ್ಲದೆ ಭೂಮಿಯಲ್ಲಿ ಸೇರಿ ಒಟ್ಟಾರೆ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಪ್ಲಾಸ್ಟಿಕ್‌ಗೆ ಬದಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಮರಗಿಡಗಳನ್ನು ಪೋಷಿಸಬೇಕು. ಹೀಗೆ ಪರಿಸರ ಉತ್ತಮಗೊಳಿಸಿ ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡುವುದು ಸ್ವಸ್ಥ ಸಮಾಜ ಸಮಿತಿಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯ್ತಿ ಮಾಜಿ ಸದಸ್ಯರಾದ ವಿರೇಶ್ ಬಿ.ಸಿ, ಮುಗಳೂರು ಪಾಂಡುರಂಗ, ಸೋಮಣ್ಣ, ರೂಪೇಶ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಲತಾ, ಉಪನ್ಯಾಸಕರಾದ ಹರೀಶ್ ಗ್ರಾಮಸ್ಥರಾದ ಮೃತ್ಯುಂಜಯ ರಾಮಚಂದ್ರ, ರಾಜು, ವಿರುಪಾಕ್ಷ, ಮೂಲೆಹೊಸಹಳ್ಳಿ ಶಿವು, ಯಶ್ವಂತ್, ಸುಮುಖ್, ಅಮಯ್, ಕಾಲೇಜು ಉಪನ್ಯಾಸಕವರ್ಗ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು