ಧಾರವಾಡ:
ಇಲ್ಲಿಯ ವಾಲ್ಮಿ ಸಂಸ್ಥೆಯಲ್ಲಿ ಬುಧವಾರ ನಡೆದ ವಿಶ್ವ ಭೂ ದಿನಾಚರಣೆ ಉದ್ಘಾಟಿಸಿದ ಅವರು, ವಾಲ್ಮಿ ಸಂಸ್ಥೆಯು ಮಣ್ಣು ಮತ್ತು ನೀರಿನ ಸದ್ಬಳಕೆ ಹಾಗೂ ರೈತರಿಗೆ ಅನುಕೂಲಕರ ಹೊಸ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅವುಗಳಿಗೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ದೇಶದ ಕೃಷಿಭೂಮಿಯಲ್ಲಿ ಸಮರ್ಪಕವಾಗಿ ಸಾಗುವಳಿ ಮಾಡಿದರೆ, ಭಾರತವು ಇಡೀ ಜಗತ್ತಿನ ಆಹಾರ ಭಂಡಾರವಾಗುವ ಸಾಮರ್ಥ್ಯ ಹೊಂದಿದೆ. ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು ಮತ್ತು ನೀರಿನ ಸಂರಕ್ಷಣೆ, ಸದ್ಬಳಕೆ ಹಾಗೂ ಅಭಿವೃದ್ಧಿಗೆ ಪೂರಕವಾಗುವ ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕಿದೆ. ಲಾಭದಾಯಕ ಕೃಷಿ ನಡೆಸುವ ಜತೆಗೆ ಮಣ್ಣಿನ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಾಲ್ಮಿ ಸಂಸ್ಥೆಯು ರೈತರಿಗೆ ನಿರಂತರವಾಗಿ ತರಬೇತಿ ನೀಡುತ್ತಿದ್ದು, ರೈತರು ಇದರ ಸದುಪಯೋಗ ಪಡೆಯಬೇಕೆಂದರು.ಕೃಷಿ ಹಾಗೂ ಪಶು ವಿಜ್ಞಾನಿಗಳು ರೈತರ ಹೊಲಗಳಿಗೆ ಭೇಟಿ ನೀಡಿ, ಮಣ್ಣಿನ ಗುಣಮಟ್ಟಕ್ಕೆ ಅನುಗುಣವಾಗಿ ಕೃಷಿ ಕೈಗೊಳ್ಳಲು ಅಗತ್ಯ ಸಲಹೆ-ಸೂಚನೆ ನೀಡುವ ಉದ್ದೇಶದಿಂದ ‘ಧಾರವಾಡ ಜಿಲ್ಲಾಡಳಿತ ಜನರ ಮನೆಗೆ’ ಎಂಬ ಯಶಸ್ವಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ವಾಲ್ಮಿ ನಿರ್ದೇಶಕ ಡಾ. ಗಿರೀಶ ಎನ್. ಮರಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಗತಿಪರ ರೈತ ಗುರುಸಿದ್ದಪ್ಪ ಹುಬ್ಬಳ್ಳಿ, ಬಸವರಾಜ ಮಾಟೊಳ್ಳಿ ಅವರನ್ನು ಸನ್ಮಾನಿಸಲಾಯಿತು.