ಬಿರುಗಾಳಿ ಮಳೆ: ಸಿಡಿಲು ಬಡಿದು ಎತ್ತು ಸಾವು

KannadaprabhaNewsNetwork |  
Published : May 24, 2024, 12:47 AM IST
ಫೋಟೋ- ಸಿಡಲು 1 ಮತ್ತು ಸಿಡಲು 2 | Kannada Prabha

ಸಾರಾಂಶ

ಕಲಬುರಗಿ ನಗರದಲ್ಲಿ ಗುರುವಾರ ಸಂಜೆ ಜೋರಾಗಿ ಹಾಗೂ ರಭಸದಿಂದ ಬೀಸಿದ ಬಿರುಗಾಳಿ, ಸಿಡಿಲಿನ ಹೊಡೆತಕ್ಕೆ ಎತ್ತು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿತನೂರಲ್ಲಿ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ನಗರದಲ್ಲಿ ಗುರುವಾರ ಸಂಜೆ ಜೋರಾಗಿ ಹಾಗೂ ರಭಸದಿಂದ ಬೀಸಿದ ಬಿರುಗಾಳಿ, ಸಿಡಿಲಿನ ಹೊಡೆತಕ್ಕೆ ಎತ್ತು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿತನೂರಲ್ಲಿ ಸಂಭವಿಸಿದೆ.

ಗ್ರಾಮದ ರೈತ ಅಂಬಾರಾಯ ಗುರುಣ್ಣ ಕಣ್ಣಿ (ಸ.ನಂ 10) ಇವರಿಗೆ ಸೇರಿದ್ದ ಎತ್ತು ಇದಾಗಿತ್ತು. ಎಂದಿನಂತೆ ಇವರು ಹೊಲದಲ್ಲಿ ಮರದ ಕೆಳಗೆ ಎತ್ತುಗಳನ್ನು ಕಟ್ಟಿ ಮೇವು ಹಾಕಿದ್ದರು. ಸಿಡಿಲಿನ ಅಬ್ಬರ ಶುರುವಾದಾಗ ಎತ್ತುಗಳು ಮರದ ಕೆಳಗೇ ಇದ್ದವು. ಸಿಡಿಲು ರಭಸದಿಂದ ಅಪ್ಪಳಿಸದ್ದರಿಂದ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದೆ.

ಸಿಡಿಲಿಗೆ ಎತ್ತು ಬಲಿಯಾದ ಸುದ್ದಿ ತಿಳಿದ ತಕ್ಷಣ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲ್‌ ಅವರು ಅಂಬಾರಾಯ ಕಣ್ಣಿ ಇವರ ಹೊಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ನೊಂದ ರೈತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸಂಜೆ 5 ಗಂಟೆಗೆ ಸಿಡಿಲು ಬಿದ್ದು ಎತ್ತು ಸಾವನ್ನಪ್ಪಿದೆ, ಮರುಕ್ಷಣವೇ 6 ಗಂಟೆಯೊಳಗೇ ಶಾಸಕರು ದುರಂತದ ಸ್ಥಳದಲ್ಲಿದ್ದು ಸಾಂತ್ವನ ಹೇಳಿದ್ದಲ್ಲದೆ ತಕ್ಷಣ ಸಂಬಂಧಪಟ್ಟಂತಹ ಎಲ್ಲರಿಗೂ ಮಾತನಾಡಿ ರೈತನ ನೆರವಿಗೆ ಬರುವಂತೆ ಸೂಚಿಸಿದ್ದು ವಿಶೇಷವಾಗಿತ್ತು.

ಗುರುವಾರ ಸಂಜೆಯ ಮಳೆಗೆ ಸೀತನೂರ ಊರಲ್ಲಿ ಬಾಳೆ ಸೇರಿದಂತೆ ಅನೇಕ ತೋಟಗಾರಿಕೆ ಬೆಳೆಗಳು ನೆಕ್ಕುರುಳಿವೆ. ಇದಲ್ಲದೆ ಊರಲ್ಲಿನ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಇದರಿದಾಗಿ ಊರಲ್ಲಿ ಕಗ್ಗತ್ತಲು ಆವರಿಸಿದೆ. ಊರಿನ ಜನರು ಸಿಡಿಲಿನಿಂದ ಸಾವನ್ನಪ್ಪಿದ ಎತ್ತಿನ ಮಾಲೀಕರಾದ ಅಂಬಾರಾಯ ಇವರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಊರಲ್ಲಿ ಗಾಳಿ, ಮಳೆ ಹೊಡೆತಕ್ಕೆ ಧರೆಗೆ ಉರುಳಿರುವ ದೀಪದ ಕಂಬಗಳನ್ನು ಆದಷ್ಟು ಬೇಗ ದುರಸ್ಥಿ ಮಾಡಿ ಮತ್ತೆ ಎಂದಿನಂತೆ ವಿದ್ಯುತ್‌ ಪೂರೈಕೆ ಆಗುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಊರವರು ಶಾಸಕರಿಗೆ ಆಗ್ರಹಿಸಿದರು. ಸ್ಥಳದಲ್ಲೇ ಅಲ್ಲಂಪ್ರಭು ಪಾಟೀಲರು ಜೆಸ್ಕಾಂ ಅಧಿಕಾರಿಗಳಿಗೆ ಮಾತನಾಡುತ್ತ ತಕ್ಷಣ ಸೀತನೂರ್ ಹಾಗೂ ಸುತ್ತಲಿನ ಗ್ರಾಮಗಳ ಕರೆಂಟ್‌ ಕಂಬಗಳ ಸಮಸ್ಯೆಗೆ ಪರಿಹಾರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪವನಕುಮಾರ್‌ ವಳಕೇರಿ, ಲಿಂಗರಾಜ ಕಣ್ಣಿ, ಭೀಮರಾವ ಮೇಳಕುಂದಾ, ಗೌತಮ ಸೇರಿದಂತೆ ಸೂತನೂರು ಗ್ರಾಮದ ಮುಖಂಡರು, ರೈತರು, ರೈತ ಕುಟುಂಬದವರು ಸ್ಥಳದಲ್ಲಿದ್ದು, ಸೀತನೂರು ಹಾಗೂ ಸುತ್ತಮುತ್ತ ಮಳೆ, ಸಿಡಿಲಿನಿಂದಾದ ಅನಾಹುತಗಳನ್ನು ಶಾಸಕರಿಗೆ ವಿವರಿಸಿ ಬೇಗ ಪರಿಹಾರಕ್ಕೆ ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ