ಗೋಕರ್ಣ: ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ಗಳು ಶುಕ್ರವಾರ ಬೆಳಗಿನ ಜಾವ ತದಡಿ ಬಳಿ ಅಘನಾಶಿನಿ ನದಿ ಸಮುದ್ರ ಸೇರುವ ಅಳಿವೆಯ ಹೂಳಿನಲ್ಲಿ ಸಿಲುಕಿದ್ದು, ಅಪಾಯದಲ್ಲಿದ್ದ 10 ಜನ ಮೀನುಗಾರರನ್ನು ಕರಾವಳಿ ಕಾವಲು ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ.
ಮೀನುಗಾರಿಕೆಗೆ ಸಂಕಷ್ಟ: ಅಳಿವೆಯಲ್ಲಿನ ಹೂಳು ತೆಗೆದು ಮೀನುಗಾರಿಕಾ ಬೋಟ್ ತೆರಳಲು ಅನುಕೂಲ ಮಾಡಿಕೊಡಬೇಕು. ತದಡಿ ಬಂದರು ಅಭಿವೃದ್ಧಿಪಡಿಸಬೇಕು ಎಂದು ಹಲವು ದಶಕಗಳಿಂದ ಇಲ್ಲಿನ ಮೀನುಗಾರರು ಸರ್ಕಾರಕ್ಕೆ ಮನವಿ ನೀಡುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೀನುಗಾರರ ಮುಖಂಡ ಉಮಾಕಾಂತ ಹೊಸ್ಕಟ್ಟ ಮಾತನಾಡಿ, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಇಲ್ಲಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೇವೆ. ಅದರೆ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಬಡ ಮೀನುಗಾರರ ಬದುಕಿಗೆ ನೆರವಾಗಬೇಕಾದ ಸರ್ಕಾರ ಮಾರಕ ಯೋಜನೆಗಳನ್ನು ತರಲು ಹವಣಿಸುತ್ತಿದೆ ಎಂದು ಆರೋಪಿಸಿದರು.