ಬೀದಿ ನಾಯಿಗಳ ದಾಳಿ: ಎಂಟು ಮಕ್ಕಳು ಸೇರಿ 18 ಮಂದಿಗೆ ಗಂಭೀರ ಗಾಯ

KannadaprabhaNewsNetwork |  
Published : Sep 28, 2025, 02:00 AM IST
27ಕೆಎಂಎನ್ ಡಿ26 ರಿಂದ 31 | Kannada Prabha

ಸಾರಾಂಶ

ಶುಕ್ರವಾರ ಬೆಳಗ್ಗೆ ಮತ್ತು ಶನಿವಾರ ಮುಸ್ಲಿಂ ಬ್ಲಾಕ್, ಚನ್ನಪಟ್ಟಣ ರಸ್ತೆ, ಕನಕಪುರ ರಸ್ತೆ ಸೇರಿದಂತೆ ವಿವಿಧಡೆ ಒಟ್ಟು 18 ಜನರಿಗೆ ಬೀದಿ ನಾಯಿಗಳು ಕಡಿದು ತೀವ್ರವಾಗಿ ಗಾಯಗೊಳಿಸಿವೆ. 

  ಹಲಗೂರು :  ಬೀದಿ ನಾಯಿಗಳು ದಾಳಿಯಿಂದ ಎಂಟು ಮಕ್ಕಳು ಸೇರಿದಂತೆ 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಶುಕ್ರವಾರ ಬೆಳಗ್ಗೆ ಮತ್ತು ಶನಿವಾರ ಮುಸ್ಲಿಂ ಬ್ಲಾಕ್, ಚನ್ನಪಟ್ಟಣ ರಸ್ತೆ, ಕನಕಪುರ ರಸ್ತೆ ಸೇರಿದಂತೆ ವಿವಿಧಡೆ ಒಟ್ಟು 18 ಜನರಿಗೆ ಬೀದಿ ನಾಯಿಗಳು ಕಡಿದು ತೀವ್ರವಾಗಿ ಗಾಯಗೊಳಿಸಿವೆ. ಗಂಭೀರವಾಗಿ ಗಾಯಗೊಂಡವರನ್ನು ಹಲಗೂರಿನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಹೆಚ್ಚಿನ ಚಿಕಿತ್ಸೆಗಾಗಿ ಮಳವಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಾಯಿಗಳ ಕಡತಕ್ಕೆ ಮಕ್ಕಳಾದ ಅದಿತ್ ಕುಮಾರ್, ಸ್ವೀಟಿ ಕುಮಾರಿ, ಮೊಹಮದ್ ನಾಸಿರ್, ಶಾಫ, ಯಾಸೀನ್, ಅಯಿಷಾ ಭಾನು, ಸಿಮ್ರಾನ್, ಹನೀಫ್, ಯುವಕರಾದ ಮುರುಗನ್, ಗಣೇಶ್, ಮಂಜು, ಮುಮಿದ್ ಅಲಂ, ಅಮರ್, ಪುಟ್ಟಸ್ವಾಮಿ, ಮಂಜು, ದಳವಾಯಿ ಕೋಡಿಹಳ್ಳಿ ಪುಟ್ಟಸ್ವಾಮಿ, ಕೊಳ್ಳೇಗಾಲ ಮಂಜು, ಮಂಡ್ಯ ಮೂಲದ ನಾಗೇಶ್ ಎಂಬುವವರು ಒಳಗಾಗಿದ್ದಾರೆ.

ಶುಕ್ರವಾರ ಸಂಜೆ ಮಕ್ಕಳು ಆಟವಾಡುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿ ಹಲವು ಮಕ್ಕಳನ್ನು ಗಾಯಗೊಳಿಸಿವೆ. ನಂತರ ಮನೆ ನಿರ್ಮಾಣ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರ ಮೇಲೂ ದಾಳಿ ಮಾಡಿವೆ. ಬೀದಿ ನಾಯಿಗಳ ಹಿಂಡು ಶನಿವಾರ ಬೆಳಗ್ಗೆಯೂ ಸಹ ದಾಳಿ ಮುಂದುವರಿಸಿವೆ.

ಹಲಗೂರಿನ ವೃದ್ಧರ ಮೇಲೂ ದಾಳಿ ಮಾಡಿ ಗಾಯಗೊಳಿಸಿವೆ. ನಿರಂತರ ಬೀದಿ ನಾಯಿ ದಾಳಿಯಿಂದಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಹೊರಗೆ ಓಡಾಡಲು ಭಯ ಪಡುತ್ತಿದ್ದಾರೆ.

ಬೆಳಗಿನ ಜಾವ ಪತ್ರಿಕೆ ವಿತರಿಸುವ ಯುವಕರು ಹಾಗೂ ಹಾಲು ವಿತರಿಸುವವರಿಗೂ ನಾಯಿಗಳ ಹಾವಳಿಯಿಂದ ತೊಂದರೆ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಲಗೂರು ಸೇರಿದಂತೆ ಹೋಬಳಿಯದಂತ ನಾಯಿಗಳ ಅವಳಿ ಹೆಚ್ಚಾಗಿದೆ. ಬೀದಿ ಬೀದಿಗಳಲ್ಲಿ ಹೆಚ್ಚಿರುವ ನಾಯಿಗಳಿಂದ ಜನರು, ಮಕ್ಕಳು ಓಡಾಡುವುದಕ್ಕೂ ಭಯಪಡುವ ಪರಿಸ್ಥಿತಿ ತಲೆದೂರಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ಚೆಂದಿಲ್ ಸಂಪರ್ಕಿಸಿದಾಗ, ಹಲಗೂರು ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿರುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಮುಂದಿನ ನಾಲ್ಕೈದು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅಥಣಿಯಲ್ಲಿ ರಸ್ತೆ ಅತಿಕ್ರಮಣ ತೆರವು
ಔದ್ಯೋಗಿಕ ಕ್ಷೇತ್ರದಲ್ಲಿ ಕೌಶಲ್ಯಯುಕ್ತ ವ್ಯಕ್ತಿತ್ವ ಅಗತ್ಯ: ಶ್ರೀನಿವಾಸನ್ ವರದರಾಜನ್‌