ಮತದಾನದ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ

KannadaprabhaNewsNetwork |  
Published : Apr 17, 2024, 01:15 AM IST
ಮತದಾರರಿಗೆ ಜಾಗೃತಿ ಮೂಡಿಸಲಾಯಿತು  | Kannada Prabha

ಸಾರಾಂಶ

ದುಡಿಯಲು ಬೇರೆ ಊರುಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸ್ವ ಗ್ರಾಮದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ.

ರೋಣ: ಪ್ರಜಾಪ್ರಭುತ್ವದಲ್ಲಿ ಮತದಾನ ಹಾಗೂ ಚುನಾವಣೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ತಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದು ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದರು.

ಅವರು ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದ ಸಾಮೂಹಿಕ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾತನಾಡಿ, ಮೇ 7 ರಂದು ದೇಶದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ತಪ್ಪದೇ ಎಲ್ಲರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಸಬೇಕು ಎಂದರು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾತನಾಡಿದ ಅವರು, ದುಡಿಯಲು ಬೇರೆ ಊರುಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸ್ವ ಗ್ರಾಮದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ. ಕೂಲಿಕಾರರಿಗೆ ಕೂಲಿ ದರ ಹೆಚ್ಚಿಸಲಾಗಿದೆ. ಪ್ರತಿಯೊಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷಕ್ಕೆ 100 ದಿನ ಕೆಲಸ ನೀಡಲಾಗುತ್ತಿದೆ. ಪ್ರತಿಯೊಂದು ಕುಟುಂಬವು ಕೂಡಾ 100 ದಿನ ಕೆಲಸ ಪೂರೈಸಿ ತಮ್ಮ ಆರ್ಥಿಕ ಮಟ್ಟ ಹೆಚ್ಚಿಸಿಕೊಳ್ಳಿ ಎಂದರು.

ಕೂಲಿ ಕೆಲಸದ ಜತೆಗೆ ಕೃಷಿಹೊಂಡ, ದನದ ಶೆಡ್, ಕುರಿ, ಮೇಕೆ ಸಾಕಾಣಿಕೆಗಾಗಿ ಶೆಡ್ ಗಳ ನಿರ್ಮಾಣ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿ ನರೇಗಾ ಯೋಜನೆಯಡಿ ಕೈಗೊಳ್ಳಲು ಅವಕಾಶವಿದೆ.ಹೀಗಾಗಿ ಎಲ್ಲ ಕೂಲಿಕಾರರು ಈ ಯೋಜನೆ ಸದುಪಯೋಗ ಪಡೆದುಕೊಳ್ಳಿ ಎಂದು ಮನರೇಗಾ ಕೂಲಿಕಾರರಿಗೆ ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವದ ಕುರಿತು ಮಾಹಿತಿ ನೀಡಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಬಿಎಫ್ ಟಿ, ಗ್ರಾಪಂ ಸಿಬ್ಬಂದಿ ಸೇರಿದಂತೆ ನರೇಗಾ ಕೂಲಿಕಾರರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ