ದೇಶದ ಅಭಿವೃದ್ಧಿಗೆ ಮೋದಿ ಕೈ ಬಲಪಡಿಸಿ

KannadaprabhaNewsNetwork |  
Published : Apr 01, 2024, 12:48 AM IST
ಫೋಟೋ : 31 ಹೆಚ್‌ಎಸ್‌ಕೆ 1 ತಾರಾ ವೆಂಕಟೇಶ್ ಭಾವ ಚಿತ್ರ | Kannada Prabha

ಸಾರಾಂಶ

ಹೊಸಕೋಟೆ: ದೇಶದ ಅಭಿವೃದ್ಧಿ ಕನಸು ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಫಲಾನುಭವಿಗಳ ಪ್ರಕೋಷ್ಠದ ತಾಲೂಕು ಅಧ್ಯಕ್ಷ ತಾರಾ ವೆಂಕಟೇಶ್ ತಿಳಿಸಿದರು.

ಹೊಸಕೋಟೆ: ದೇಶದ ಅಭಿವೃದ್ಧಿ ಕನಸು ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಫಲಾನುಭವಿಗಳ ಪ್ರಕೋಷ್ಠದ ತಾಲೂಕು ಅಧ್ಯಕ್ಷ ತಾರಾ ವೆಂಕಟೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕಸಿತ ಭಾರತದ ದೃಢಸಂಕಲ್ಪ ಹೊತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ 9 ವರ್ಷಗಳಿಂದ ದೇಶದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ರೀತಿಯಲ್ಲಿ ಶ್ರಮಿಸಿದ್ದಾರೆ. ಪ್ರಮುಖವಾಗಿ ಬಲಿಷ್ಠ ಹಾಗೂ ಸದೃಢ ದೇಶ ನಿರ್ಮಾಣ ಮಾಡಲು ಅಡಿಪಾಯ ಹಾಕಿದ್ದು ಮತ್ತಷ್ಟು ಅಭಿವೃದ್ಧಿ ಶೀಲ ಹಾಗೂ ಸದೃಢ ದೇಶವನ್ನು ಕಟ್ಟಬೇಕಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನ ಅಧಿಕಾರಕ್ಕೆ ತರಲು ಮತದಾರರು ಬಿಜೆಪಿಗೆ ಮತ ನೀಡಬೇಕು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ ಅವರನ್ನ ಗೆಲ್ಲಿಸಬೇಕು ಎಂದು ಹೇಳಿದರು.

ಜನಪರ ಯೋಜನೆಗಳನ್ನ ತಿಳಿಸಿ: ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶಿಕ್ಷಣ ಆರೋಗ್ಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸಾಮಾನ್ಯ ವರ್ಗದ ಜನರಿಗೂ ತಲುಪಿಸುವ ದೃಷ್ಟಿಯಿಂದ ಹಲವಾರು ರೀತಿಯ ಯೋಜನೆಗಳನ್ನು ರೂಪಿಸಿದ್ದಾರೆ. ಪ್ರತಿಯೊಂದು ಯೋಜನೆಗಳನ್ನು ಪ್ರತಿ ಮನೆಮನೆಗೂ ತಿಳಿಸುವ ಕಾರ್ಯ ಮಾಡಬೇಕು. ಪ್ರಮುಖವಾಗಿ ಫಲಾನುಭವಿಗಳನ್ನು ಒಗ್ಗೂಡಿಸಿ ಫಲಾನುಭವಿಗಳ ಮೂಲಕ ಮತ್ತಷ್ಟು ಜನರನ್ನ ತಲುಪುವ ಕಾರ್ಯ ಮಾಡಬೇಕು ಎಂದು ಹೇಳಿದರು.ಬಾಕ್ಸ್‌...........

ಆರೋಗ್ಯ ಸಚಿವರಾಗಿ ಸುಧಾಕರ್ ಉತ್ತಮ ಸೇವೆ:

ಡಾ.ಕೆ ಸುಧಾಕರ್ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿ ಕೊರೋನಾ ಸಂದರ್ಭದಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ ಎಂದು ತಾರಾ ವೆಂಕಟೇಶ್‌ ಹೇಳಿದರು.

ಪ್ರಮುಖವಾಗಿ ಹೊಸಕೋಟೆಗೆ ತಾಯಿ ಮಗುವಿನ ಆಸ್ಪತ್ರೆಯನ್ನ ಮಂಜೂರು ಮಾಡಿಕೊಟ್ಟಿದ್ದಾರೆ. ಈಗ ಅವರು ಚಿಕ್ಕಬಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿದ್ದು ಬಹುಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಕೇಂದ್ರದಲ್ಲಿ ಸಚಿವರಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.ಫೋಟೋ : 31 ಹೆಚ್‌ಎಸ್‌ಕೆ 1

ತಾರಾ ವೆಂಕಟೇಶ್ ಭಾವ ಚಿತ್ರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!