ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಮಂಗಳವಾರ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ತಮ್ಮ ಉತ್ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಿದೆ ಎಂದರು.ಇತ್ತೀಚಿನ ಚುನಾವಣೆಗಳಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರದ ಪ್ರದೇಶದಲ್ಲಿ ವಾಸಿಸುತ್ತಿರುವವರ ಮತದಾನ ಮಾಡುವ ಪ್ರಮಾಣ ಕಡಿಮೆ ಇದೆ. ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಸ್ಥಳಗಳನ್ನು ಸಮೀಕ್ಷೆ ಮಾಡಿ, ಮತದಾನ ಕಡಿಮೆ ಆಗಿರುವ ಕಾರಣ ಗುರುತಿಸಿ, ಅಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಮತದಾನದ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ ಎಂದರು.
ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ ಹಾಗೂ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಬಾಯಲ್ ಸೂಚಿಸಿದರು.
ಇದೇ ಸಂದರ್ಭದಲ್ಲಿ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿ.ಪಂ. ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.