ಒತ್ತಡರಹಿತ ಕಲಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯ: ಜೊಸ್ಮಿನ್ ಡಯಾಸ್

KannadaprabhaNewsNetwork |  
Published : Nov 15, 2025, 02:30 AM IST
ಪ್ರಭಾತ್ ನಗರ ನಂಬರ್ ಎರಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕ- ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಭಾತ್ ನಗರ ನಂಬರ್ ಎರಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕ- ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆಯಲ್ಲಿ ಪಟ್ಟಣ ಪಂಚಾಯತ ಮಾಜಿ ಸದಸ್ಯೆ ಜೊಸ್ಮಿನ್ ಡಯಾಸ್ ಮಾತನಾಡಿದರು. | Kannada Prabha

ಸಾರಾಂಶ

ಹೊನ್ನಾವರ ಪ್ರಭಾತ್ ನಗರ ಹಿರಿಯ ಪ್ರಾಥಮಿಕ ಶಾಲೆ-2ರಲ್ಲಿ ಪೋಷಕ- ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ದಾನಿಗಳಾದ ಎಂ.ಪಿ. ಭಟ್ ಅವರು ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿದರು.

ಹೊನ್ನಾವರ: ಒತ್ತಡ ರಹಿತ ಕಲಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯ ಎಂದು ಪಪಂ ಮಾಜಿ ಸದಸ್ಯೆ ಜೊಸ್ಮಿನ್ ಡಯಾಸ್ ಹೇಳಿದರು.

ಅವರು ಪ್ರಭಾತ್ ನಗರ ಹಿರಿಯ ಪ್ರಾಥಮಿಕ ಶಾಲೆ-2ರಲ್ಲಿ ನಡೆದ ಪೋಷಕ- ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳನ್ನು ತಮ್ಮ ಮಕ್ಕಳೆಂದೇ ಭಾವಿಸಿ ಉತ್ತಮ ಶಿಕ್ಷಣದ ಜತೆಗೆ ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಶಿಕ್ಷಕರ ಪ್ರಾಮುಖ್ಯತೆ ಮಹತ್ವವಾದದು. ಮಕ್ಕಳು ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಸರ್ಕಾರದ ಯೋಜನೆ ಫಲಪ್ರದವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುವಂತಾಗಲಿ ಎಂದರು.

ಉಪನ್ಯಾಸಕರಾಗಿ ಆಗಮಿಸಿದ ವಕೀಲೆ ವೈಶಾಲಿ ನಾಯ್ಕ ಮಾತನಾಡಿ, ಹದಿನಾಲ್ಕು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ಜಾರಿಗೆ ತರಲಾಗಿದೆ. ಯಾರು ಶಿಕ್ಷಣದಿಂದ ವಂಚಿತರಾಗದೇ ಎಲ್ಲರೂ ಶಿಕ್ಷಣ ಪಡೆಯಬೇಕು ಎಂದು ಕರೆ ನೀಡಿದರು. ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ನೀತಿ, ಬಾಲಾಪರಾಧಗಳಾದ ಬಾಲ್ಯ ವಿವಾಹ, ಬಾಲ ಕಾರ್ಮಿಕ ನಿಷೇಧ, ಲೈಂಗಿಕ ದೌರ್ಜನ್ಯ, ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ ಮುಂತಾದ ವಿಷಯಗಳ ಕುರಿತು ಮಾತನಾಡಿದರು.

ಹಳೆಯ ವಿದ್ಯಾರ್ಥಿ, ಸಮಾಜ ಸೇವಕ ನೀಲನ್ ಮಿರಾಂಡ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದಿನ ಮಕ್ಕಳಿಗೆ ಪ್ರೀತಿಯೊಂದೇ ಸಾಲದು. ಪ್ರೀತಿಯ ಜತೆಗೆ ಅವರಿಗರಿಯದೆ ಶಿಕ್ಷೆ ನೀಡಿದರೆ ಮಕ್ಕಳು ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದರು. ನಮ್ಮ ಬದುಕಿನಲ್ಲಿ ನಮಗಿಂತಲೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಬದುಕು ಸಾರ್ಥಕ ಎಂದರು. ಎಸ್‌ಡಿಎಂಸಿ ಅಧ್ಯಕ್ಷೆ ನೇತ್ರಾವತಿ ತಾಂಡಲ್ ಅಧ್ಯಕ್ಷತೆ ವಹಿಸಿದ್ದರು.

ಪಪಂ ಉಪಾಧ್ಯಕ್ಷರಾದ ಲೋಲಾಸ್ ಪುಡ್ತಾಡೊ, ದಾನಿಗಳಾದ ಎಂ.ಪಿ. ಭಟ್, ವಕೀಲರಾದ ವಿ.ವಿ. ನಾಯ್ಕ, ಎಂಜಿನಿಯರ್ ಬಾಲ್ತಿದಾರ್ ಫರ್ನಾಂಡಿಸ್‌ ಮಾತನಾಡಿದರು.

ದಾನಿಗಳಾದ ಎಂ.ಪಿ. ಭಟ್ ಅವರು ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿದರು. ಶಾಲೆಯ ಪರವಾಗಿ ಹಳೆಯ ವಿದ್ಯಾರ್ಥಿ ನೀಲನ್ ಮಿರಾಂಡ್ ಮತ್ತು ದಾನಿಗಳಾದ ಎಂ.ಪಿ. ಭಟ್ ಅವರನ್ನು ಸನ್ಮಾನಿಸಲಾಯಿತು.

ಐದನೇ ತರಗತಿಯ ನಿಶ್ಮಿತಾ ಪಟಗಾರ ಸಂವಿಧಾನ ಪೀಠಿಕೆ ಓದಿದರು. ಮುಖ್ಯಾಧ್ಯಾಪಕಿ ಲುವೇಜಿನ ಪಿಂಟೋ ಸ್ವಾಗತಿಸಿದರು. ಶಿಕ್ಷಕ ಪಿ.ಆರ್. ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪ್ಲಾವೀಯಾ ಮೆಂಡೋಸ್ ಕಾರ್ಯಕ್ರಮ ನಿರೂಪಿಸಿದರು.

:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ