ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು ಈಗಾಗಲೇ ತೆರೆಯಲಾಗಿದೆ. ದಿನದ 24 ಗಂಟೆಯೂ ಇವುಗಳ ಮೂಲಕ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ಮುಂದೆ ಬಿಡಲಾಗುತ್ತದೆ.
ಪ್ರತಿ ವಾಹನವನ್ನೂ ನಿಲ್ಲಿಸಿ ಅದರಲ್ಲಿ ಸಾಗಾಟ ಮಾಡುವ ವಸ್ತುಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಗುತ್ತದೆ. ಇಲ್ಲಿ ಓರ್ವ ಸ್ಟಾಟಿಕ್ ಸರ್ವೆ ಲೈನ್ ಲೀಡರ್, ಅಬಕಾರಿ ಪೊಲೀಸ್, ಟ್ರಾಫಿಕ್ ಪೊಲೀಸ್, ಸ್ಥಳೀಯ ಠಾಣೆಯ ಪೊಲೀಸ್,ವಿಡಿಯೋ ಗ್ರಾಫರ್ ಸೇರಿದಂತೆ ಮೂರು ಪಾಳಿಗಳಲ್ಲಿ ಬೇರೆ ಬೇರೆ ತಂಡಗಳು ಕಾರ್ಯನಿರ್ವಹಿಸುತ್ತವೆ. ಇದು ಚುನಾವಣಾ ನೀತಿ ಸಂಹಿತೆ ಕೊನೆಗೊಳ್ಳುವವರೆಗೂ ಮುಂದುವರಿಯಲಿದೆ.ಕಾರ್ಯನಿರ್ವಹಿಸದ ಗೇಟ್:
ಪಂಚಾಯಿತಿ ಕೆಲಸ ಕುಂಠಿತ:
ಚೆಕ್ ಪೋಸ್ಟ್ ಗಳಲ್ಲಿ ಕೆಲವು ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇವರು ನೀತಿ ಸಂಹಿತೆ ಕೊನೆಗೊಳ್ಳುವವರೆಗೂ ಕಾರ್ಯನಿರ್ವಹಿಸಬೇಕಾಗಿದೆ ದಿನದ 8 ಗಂಟೆ ಇವರಿಗೆ ಕಡ್ಡಾಯ ಚೆಕ್ ಪೋಸ್ಟ್ ನಿರ್ವಹಣೆ ಜವಾಬ್ದಾರಿ ಇರುತ್ತದೆ. ಈ ಕಾರಣದಿಂದ ಪಂಚಾಯಿತಿಗಳಿಗೆ ಹೋಗಲು ಸಮಯಾವಕಾಶ ಸಿಗುವುದಿಲ್ಲ. ಇದರಿಂದ ಯಾವ ಪಂಚಾಯಿತಿಗಳ ಪಿಡಿಒಗಳಿಗೆ ಹಾಗೂ ಸಿಬ್ಬಂದಿಗಳಿಗೆ ಚೆಕ್ ಪೋಸ್ಟ್ ಜವಾಬ್ದಾರಿ ನೀಡಲಾಗಿದೆಯೋ ಅಂತಹ ಪಂಚಾಯಿತಿಗಳ ಗ್ರಾಮಸ್ಥರ ಕೆಲಸಗಳು ಸಾಗುತ್ತಿಲ್ಲ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.