ಕಾರವಾರ: ಜಿಲ್ಲೆಯಲ್ಲಿ ಕಲ್ಲು ಕ್ರಷರ್ಗಳಿಗೆ ಅನುಮತಿ ನೀಡುವ ಮುನ್ನ ಕ್ರಷರ್ ಅಧಿನಿಯಮದಲ್ಲಿನ ಸಂರಕ್ಷಿತ ವಲಯ ಕುರಿತಂತೆ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ಕಲ್ಲು ಕ್ರಷರ್ಗಳು ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯಿಂದ, ಜಿಲ್ಲಾ ರಸ್ತೆಯಿಂದ ಮತ್ತು ಇತರೆ ರಸ್ತೆಯಿಂದ, ಕಂದಾಯ ಗ್ರಾಮ, ದೇವಸ್ಥಾನ, ಶಾಲೆಯಿಂದ ನಿಗದಿತ ದೂರದಲ್ಲಿರುವುದರ ಬಗ್ಗೆ ಸ್ಥಳ ಪರಿಶೀಲಿಸಿ, ಲಿಖಿತ ಆಭಿಪ್ರಾಯ ದಾಖಲಿಸಬೇಕು. ಕ್ರಷರ್ಗಳಿಂದ ಸಾರ್ವಜನಿಕರು ಮತ್ತು ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಅನುಮತಿಗಳನ್ನು ನೀಡಬೇಕು.
ಜಿಲ್ಲೆಯಲ್ಲಿ ಪ್ರಸ್ತುತ ಈಗಾಗಲೇ ಕ್ರಷರ್ಗಳಿಗೆ ಅನುಮತಿ ಪಡೆದು ಲೈಸೆನ್ಸ್ ನವೀಕರಣ ಕೋರುವ ಅರ್ಜಿಗಳ ಕುರಿತಂತೆ ಸಂಬಂಧಪಟ್ಟ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದರು.ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಆಶಾ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಸಂಬಂಧಿಸಿದಂತೆ ಒಟ್ಟು 205 ಪ್ರಕರಣಗಳನ್ನು ಪತ್ತೆ ಹಚ್ಚಿ ₹63.53 ಲಕ್ಷ ದಂಡ ವಿಧಿಸಲಾಗಿದೆ. ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ 9 ಪ್ರಕರಣಗಳನ್ನು ಪತ್ತೆ ಹಚ್ಚಿ ಅಂದಾಜು 529 ಮೆ. ಟನ್ ಮರಳನ್ನು ಜಪ್ತಿ ಮಾಡಿ ಸರ್ಕಾರಿ ಕಾಮಗಾರಿಗಳಿಗೆ ಹಸ್ತಾಂತರಿಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ. ರವಿಶಂಕರ್, ಉಪ ವಿಭಾಗಾಧಿಕಾರಿ ಕನಿಷ್ಕ, ಡಿಎಸ್ಪಿ ಗಿರೀಶ್ ಮತ್ತಿತರರು ಇದ್ದರು.ಸ್ವನಿಯಂತ್ರಣ ಅತಿ ಮುಖ್ಯ
ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ಶುಕ್ರವಾರ ಸೈಬರ್ ಅಪರಾಧಗಳು ಹಾಗೂ ಜಾಗೃತಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ನಡೆಯುತ್ತಿರುವ ಅಪರಾಧಗಳನ್ನು ತಡೆಯಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದರು.ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನ ಪ್ರಾಚಾರ್ಯ ರಾಮ ಭಟ್ಟ ಪಿ., ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.