ಕಾರವಾರ: ಜಿಲ್ಲೆಯಲ್ಲ್ಲಿಐಪಿಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ, ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಪ್ರಸಕ್ತ ತ್ರೈ ಮಾಸಿಕದಲ್ಲಿ ಒಟ್ಟು 31 ಮಟ್ಕಾ ಪ್ರಕರಣಗಳಲ್ಲಿ 86 ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿರುವ ಬಗ್ಗೆ ಹಾಗೂ ಯಾವುದೇ ಅನಧಿಕೃತ ಲಾಟರಿ ಹಾವಳಿ ಪ್ರಕರಣಗಳು ದಾಖಲಾಗದೇ ಇರುವ ಬಗ್ಗೆ ಮಾಹಿತಿ ಪಡೆದು, ಜಿಲ್ಲೆಯನ್ನು ಸಂಪೂರ್ಣ ಅನಧಿಕೃತ ಲಾಟರಿ, ಮಟ್ಕಾಹಾವಳಿ ಮುಕ್ತ ವಲಯವನ್ನಾಗಿ ಮಾಡಲು ಪ್ಲಾಯಿಂಗ್ ಸ್ಕ್ವಾಡ್ ಸದಸ್ಯರು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ನಿರೀಕ್ಷಕ ನಿತ್ಯಾನಂದ ಪಂಡಿತ್, ವಾಣಿಜ್ಯ ತೆರಿಗೆ ಅಧಿಕಾರಿ ಷಣ್ಮುಗಪ್ಪ ನರೇಗಲ್, ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕ ಗಣೇಶ ಪಟಗಾರ, ಅಭಿವೃದ್ಧಿ ಅಧಿಕಾರಿ ಕಾಶಿಮಸಾಬ ಮುಲ್ಲಾ ಇದ್ದರು.