ಕನ್ನಡಪ್ರಭ ವಾರ್ತೆ ದಾಬಸ್ಪೇಟೆ
ತ್ಯಾಮಗೊಂಡ್ಲು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ 2024- 25ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಾಲೇಜು ದಿನಗಳಲ್ಲಿ ಪಠ್ಯದ ಜೊತೆಜೊತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿದೆ. ಗ್ರಾಮೀಣ ವಿದ್ಯಾರ್ಥಿಗಳು ತಮ್ಮ ತಂದೆ- ತಾಯಿಯ ನಂಬಿಕೆ ಉಳಿಸಿಕೊಂಡು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಿ. ಕಾಲೇಜಿನ ಆವರಣದಲ್ಲಿ ಸುಸಜ್ಜಿತ ಸಭಾಂಗಣ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ 10 ಕೋಟಿ ರು. ಅನುದಾನ ಮುಂದಿನ ದಿನಗಳಲ್ಲಿ ತರುತ್ತೇನೆ. ವಿದ್ಯಾರ್ಥಿಗಳ ಸರ್ವತೋಮುಖ ಕಲಿಕೆಗೆ ಉಪನ್ಯಾಸಕರು ಶ್ರಮಿಸಬೇಕು ಎಂದರು.ಕರ್ನಾಟಕ ಸರ್ಕಾರದ ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಮಾತನಾಡಿ, ಪದವಿ ಕಾಲೇಜಿನ ಮೂರು ವರ್ಷಗಳ ಕಲಿಕೆ ನಮ್ಮ ಮುಂದಿನ 30 ವರ್ಷಗಳ ಜೀವನಕ್ಕೆ ಸಹಕಾರಿಯಾಗಬೇಕು. ಸೇವಾ ಮನೋಭಾವ, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಗ್ರಾಪಂ ಅಧ್ಯಕ್ಷ ಮಲ್ಲೇಶ್, ಜಿಪಂ ಮಾಜಿ ಸದಸ್ಯ ಹೊನ್ನಸಿದ್ದಯ್ಯ, ಬಗರ್ ಹುಕುಂ ಸಮಿತಿ ಸದಸ್ಯ ವಾಸುದೇವ್, ಕಾಲೇಜಿನ ಉಪನ್ಯಾಸಕರಾದ ಡಾ.ರತ್ನಮ್ಮ, ದಿಡಾಕರ್, ಮಂಜುನಾಥ್, ತಾರಾಮಣಿ, ಸಿದ್ದೇಶ್ವರಪ್ಪ ನಿರ್ಮಲ, ಸಂಗಮ್, ಅರವಿಂದ್, ರಮೇಶ್, ಸಾಯಿಪ್ರಸಾದ್, ಆನಂದ್ ಉಪಸ್ಥಿತರಿದ್ದರು.