ಸಹಕಾರಿ ಸಂಸ್ಥೆ ಬೆಳವಣಿಗೆಗೆ ಶ್ರಮಿಸಿ

KannadaprabhaNewsNetwork |  
Published : Sep 22, 2024, 01:47 AM IST
ತುಮಕೂರು ಪಟ್ಟಣ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ವಾರ್ಷಿಕ ಸಭೆಯಲ್ಲಿ ಹಿರೇಮಠಶ್ರೀ | Kannada Prabha

ಸಾರಾಂಶ

ತುಮಕೂರು: ಸಹಕಾರ ಸಂಸ್ಥೆಗಳು ಸಮುದಾಯದ ಬೆಳವಣಿಗೆಗೆ ನೆರವಾಗುತ್ತವೆ. ಇಂತಹ ಸಂಸ್ಥೆಗಳನ್ನು ಸಮರ್ಥವಾಗಿ ಕಟ್ಟಿ ಬೆಳೆಸಿ ಹೆಚ್ಚು ಜನರಿಗೆ ಅದರ ಪ್ರಯೋಜನವಾಗುವಂತೆ ಮಾಡಬೇಕು ಎಂದು ಹಿರೇಮಠ ಅಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತುಮಕೂರು: ಸಹಕಾರ ಸಂಸ್ಥೆಗಳು ಸಮುದಾಯದ ಬೆಳವಣಿಗೆಗೆ ನೆರವಾಗುತ್ತವೆ. ಇಂತಹ ಸಂಸ್ಥೆಗಳನ್ನು ಸಮರ್ಥವಾಗಿ ಕಟ್ಟಿ ಬೆಳೆಸಿ ಹೆಚ್ಚು ಜನರಿಗೆ ಅದರ ಪ್ರಯೋಜನವಾಗುವಂತೆ ಮಾಡಬೇಕು ಎಂದು ಹಿರೇಮಠ ಅಧ್ಯಕ್ಷ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ತುಮಕೂರು ಪಟ್ಟಣ ಕ್ರೆಡಿಕ್ ಕೋ-ಆಪರೇಟೀವ್ ಸೊಸೈಟಿಯಲ್ಲಿ ಶುಕ್ರವಾರ ನಡೆದ ಸರ್ವ ಸದಸ್ಯರ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು. ಬದಲಾಗುತ್ತಿರುವ ತಂತ್ರಜ್ಞಾನ, ಸುಧಾರಿತ ಸೇವಾಕ್ರಮಗಳನ್ನು ಅಳವಡಿಸಿಕೊಂಡರೆ ಸಹಕಾರ ಸಂಸ್ಥೆಗಳು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಾಗುತ್ತವೆ. ಉತ್ತಮ ಸೇವೆಯಿಂದ ಹೆಚ್ಚು ಗ್ರಾಹಕರನ್ನು ಆಕರ್ಷಿಸಲು ಅವಕಾಶವಿದೆ.

ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳುವುದು ಒಳ್ಳೆಯದು. ಸಮುದಾಯಕ್ಕಾಗಿ ನಾವು ಮಾಡುವ ಕೆಲಸವನ್ನು ಇತರರು ಸ್ಮರಿಸುವಂತೆ ಮಾದರಿಯಾಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಸೊಸೈಟಿಯ ಅಧ್ಯಕ್ಷ ಪಿ.ಆರ್. ದೇವರಾಜು ಮಾತನಾಡಿ, 42 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆ ಹಲವರ ಸೇವೆ ಶ್ರಮದಿಂದ ದೊಡ್ಡದಾಗಿ ಬೆಳೆದಿದೆ. ಇದನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಎಲ್ಲರೂ ಸಹಕಾರ ನೀಡಬೇಕು. ಷೇರು ಬಂಡವಾಳವನ್ನು ಒಂದು ಕೋಟಿ ರು.ಗೆ ಹೆಚ್ಚಿಸುವುದು, 8 ಕೋಟಿ ರು.ವರೆಗೆ ಠೇವಣಿ ಸಂಗ್ರಹ ಮಾಡುವುದು, ನಿವ್ವಳ ಲಾಭವನ್ನು 15 ಲಕ್ಷ ರು.ಗೆ ಹೆಚ್ಚಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷ ಪಿ.ಎನ್.ದೇವರಾಜು, ನಿರ್ದೇಶಕ ಎಸ್.ಲಕ್ಷ್ಮೀನಾರಾಯಣ, ಹೆಚ್.ಬಿ.ಲಕ್ಷ್ಮೀಕಾಂತ್, ಶ್ರೀನಿವಾಸಪ್ರಸಾದ್, ಜಯಪ್ರಕಾಶ್, ಟಿ.ಎನ್.ರೇಣುಕುಮಾರ್, ಟಿ.ಆರ್.ಸತೀಶ್‌ಕುಮಾರ್, ಮನೋಹರಗೌಡ, ಎ.ವೈ.ಹನುಮಂತರಾಯಪ್ಪ, ಜಿ.ಶಶಿಕಲಾ, ಜಿ.ನೇತ್ರಾವತಿ, ಹೆಬ್ಬೂರು ಶ್ರೀನಿವಾಸಮೂರ್ತಿ, ಜಿ.ವೆಂಕಟೇಶ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ.ಪಿ. ಸಂದೇಶ್ ಭಾಗವಹಿಸಿದ್ದರು.

ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಹಿರಿಯ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ