ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಪಟ್ಟಣದ ದ್ವಾರಕ ಫಂಕ್ಷನ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಚಿಕ್ಕಬಳ್ಳಾಪುರ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಈ ಲೋಕಸಭಾ ಚುನಾವಣೆಯ ಕಣದಲ್ಲಿದ್ದೇನೆ, ನನಗೆ ಅವಕಾಶ ನೀಡಿದರೆ ಬಾಗೇಪಲ್ಲಿಗೆ ರೈಲು ವ್ಯವಸ್ಥೆ, ಕೈಗಾರಿಕೆಗಳನ್ನು ತಂದು ನಿರೋದ್ಯೋಗಿ ಯುವಕರಿಗೆ ಉದ್ಯೋಗ ಅವಕಾಶಗಳನ್ನು ನೀಡುವುದಲ್ಲದೆ ಬಯಲು ಸೀಮೆ ಮತ್ತು ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಗಳನ್ನು ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಭಾಗದಲ್ಲಿ ಜೆಡಿಎಸ್ ತನ್ನದೇ ಆದ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿದೆ, ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಬಿಜೆಪಿ ಪಕ್ಷದ ಅಭ್ಯರ್ಥಿಗೆ ಸಹಕರಿಸುವ ಮೂಲಕ ನರೇಂದ್ರ ಮೋದಿಜೀಯವರನ್ನು ಪ್ರಧಾನ ಮಂತ್ರಿಯನ್ನಾಗಿಸಲು ಶ್ರಮಿಸಬೇಕೆಂದು ಮನವಿ ಮಾಡಿದರು.ರಾಜ್ಯ ವಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ ಮಾತನಾಡಿ, ಸುಧಾಕರ್ ರವರು ಕೇವಲ 9 ವರ್ಷಗಳ ಅವಧಿಯಲ್ಲಿ 62 ಕೆರೆಗಳಿಗೆ ನೀರು ತುಂಬಿಸಿದ್ದಾರೆ, ಕೈಗಾರಿಕೆಗಳನ್ನು ಸ್ಥಾಪಿಸಿ ಯುವ ಜನತೆಗೆ ಉದ್ಯೋಗವಕಾಶಗಳನ್ನು ಕಲ್ಪಿಸಿದ್ದಾರೆ, ಇಂತಹ ವ್ಯಕ್ತಿಗೆ ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದರು.