ಕನ್ನಡಪ್ರಭ ವಾರ್ತೆ ಮಂಗಳೂರು
ಅವರು ಪದಗ್ರಹಣ ಅಧಿಕಾರಿಯಾಗಿ ರೋಟರಿ ಕ್ಲಬ್ ಮಂಗಳೂರು ಸಿ ಸೈಡ್ ಸಂಸ್ಥೆ ನಗರದ ಮಾಯಾ ಇಂಟರ್ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ಜರಗಿದ ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿವಿಧಾನವನ್ನು ನೆರವೇರಿಸಿ ಮಾತನಾಡಿದರು.
ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಡಾ.ರಂಜನ್ರವರು ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿ ತಮ್ಮ ಪೂರ್ಣ ಸಹಕಾರವನ್ನು ನೀಡುವ ಅಶ್ವಾಸನೆ ನೀಡಿ ಸಂಸ್ಥೆಯ ವಾರ್ತಾ ಗೃಹಪತ್ರಿಕೆ ‘ಸಮುದ್ರ ವಾಹಿನಿ’ಯನ್ನು ಅನಾವರಣಗೊಳಿಸಿದರು.ವಲಯ ಅಧಿಕಾರಿ ಡಾ. ಯತೀಶ್ ಕುಮಾರ್ ಮತ್ತು ಸಂಸ್ಥೆಯ ಸಲಹೆಗಾರ ಮಾದವ್ ಸುವರ್ಣ ರವರು ಸಂಸ್ಥೆಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿ ಸಂಸ್ಥೆಯು ಜಿಲ್ಲಾ ಮಟ್ಟದಲ್ಲಿ ಪ್ಲಾಟಿನಮ್ ಪ್ರಶ್ತಸಿ ಪಡೆದಿರುದನ್ನು ಅಭಿನಂದಿಸಿ ನೂತನ ತಂಡಕ್ಕೆ ಯಶಸ್ಸು ಕೋರಿದರು.
ಮನೋಹರ್ ಕದ್ರಿ ನಿರೂಪಿಸಿದರು. ಕಾರ್ಯದರ್ಶಿ ಆಶೋಕ್ ವಂದಿಸಿದರು.ಪದಾಧಿಕಾರಿಗಳ ವಿವರ: ಕೋಶಾಧಿಕಾರಿ ಅಚ್ನ್ ಶೆಟ್ಟಿ, ದಂಡಾಧಿಕಾರಿ ಜಗಜೀವನ್ ದಾಸ್, ನಿರ್ದೇಶಕರು ನೆಲ್ಸನ್ ಗೋವಿಯಸ್ (ಸಂಸ್ಥೆ ಸೇವೆ), ಕಿರಣ್ ಕುಮಾರ್ (ವೃತ್ತಿಪರ ಸೇವೆ) ಚಂದ್ರಶೇಖರ್ (ಸಮುದಾಯ ಸೇವೆ) ಸುರೇಶ್ (ಅಂತಾರಾಷ್ಟ್ರೀಯ ಸೇವೆ), ಸುನಂದ (ಯುವಜನ ಸೇವೆ).